ಕಳೆದ ಏಳು ವರ್ಷಗಳಿಂದ ಪ್ರಧಾನಿಯಿಂದ ಒಂದೇ ರೀತಿಯ ಭಾಷಣ: ಖರ್ಗೆ

Source: PTI | By MV Bhatkal | Published on 15th August 2021, 8:49 PM | National News | Don't Miss |

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ ಯೋಜನೆಗಳನ್ನು ಘೋಷಿಸುತ್ತಾರೆಯೇ ಹೊರತು ಅದನ್ನು ಜಾರಿಗೆ ತರುವುದಿಲ್ಲ’ ಎಂದು ಕಾಂಗ್ರೆಸ್‌ ಭಾನುವಾರ ದೂರಿದೆ.

ಕಳೆದ ಏಳು ವರ್ಷದಿಂದ ಪ್ರಧಾನಿಯವರು ಒಂದೇ ರೀತಿಯ ಭಾಷಣವನ್ನು ನೀಡುತ್ತಾ ಬಂದಿದ್ದಾರೆ. ಆದರೆ ಈವರೆಗೆ ಸಣ್ಣ ರೈತರು, ನೊಂದ ವರ್ಗಗಳಿಗಾಗಿ ಏನೂ ಕೆಲಸವನ್ನು ಮಾಡಿಲ್ಲ. ಅವರು ಹೊಸ ಯೋಜನೆಗಳನ್ನು ಘೋಷಿಸುತ್ತಾರೆ. ಆದರೆ ಜಾರಿಗೆ ತರುವುದಿಲ್ಲ. ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ. ಆದರೆ ಅದನ್ನು ಕಾರ್ಯಗತಗೊಳಿಸುವುದಿಲ್ಲ’ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ.
ಈಗ ನೂತನ ಕೃಷಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರಿಗೆ ಅಪಾಯವನ್ನು ತಂದಿಟ್ಟಿದ್ದಾರೆ. ಆದರೆ ಈಗಲೂ ಅವರು ಸಣ್ಣ ರೈತರು ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಆಡಳಿತವನ್ನು ದೂರುತ್ತಾರೆ. ಕೆಂಪುಕೋಟೆಯಲ್ಲಿ ಪದೇ ಪದೇ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವುದರಿಂದ ದೇಶದ ಪ್ರಗತಿಯಾಗುದಿಲ್ಲ’ ಎಂದು ಅವರು ಹೇಳಿದರು.
ಕಾಂಗ್ರೆಸ್ ಆಡಳಿತದಲ್ಲಿದ್ದಾಗ ರೈತರಿಗಾಗಿ ನೀರಾವರಿ ಯೋಜನೆ ಸೇರಿದಂತೆ ಹಲವರು ಕೆಲಸಗಳನ್ನು ಮಾಡಿದೆ. ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರು ಯುಪಿಎ ಆಡಳಿತಾವಧಿಯಲ್ಲಿ ರೈತರ ಸಾಲವನ್ನೂ ಮನ್ನಾ ಮಾಡಿದ್ದರು’ ಎಂದು ಅವರು ತಿಳಿಸಿದರು.‘ಮೂಲಸೌಕರ್ಯ ವಲಯದ ಅಭಿವೃದ್ಧಿಗಾಗಿ ಪ್ರಧಾನಿ ಅವರು ಎರಡು ವರ್ಷಗಳ ಹಿಂದೆಯೂ ₹100 ಲಕ್ಷ ಕೋಟಿಯನ್ನು ಘೋಷಿಸಿದ್ದರು. ಈಗ ಕನಿಷ್ಠ ₹100 ಲಕ್ಷ ಕೋಟಿಯ ಸಂಖ್ಯೆಯನ್ನಾದರೂ ಬದಲಿಸಬೇಕಾಗಿತ್ತು’ ಎಂದು ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಅವರು ಟ್ವೀಟ್‌ ಮಾಡಿದ್ದಾರೆ. ಇದರೊಂದಿಗೆ ಪ್ರಧಾನಿ ಅವರ 2019ರ ಸ್ವಾತಂತ್ರ್ಯ ದಿನಾಚರಣೆಯ ಭಾಷಣಕ್ಕೆ ಸಂಬಂಧಿಸಿದ ಸುದ್ದಿಯೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...