ಸುಳ್ಯದಲ್ಲಿ ಸಂಪತಕುಮಾರ ಹತ್ಯೆ ಪ್ರಕರಣ. ಐವರನ್ನ ವಶಕ್ಕೆ ಪಡೆದ ಪೊಲೀಸರು.

Source: SO News | By Laxmi Tanaya | Published on 11th October 2020, 8:03 PM | Coastal News | Don't Miss |

ಮಂಗಳೂರು : ಅಕ್ಟೋಬರ್  ಎಂಟರಂದು  ಸುಳ್ಯ ತಾಲೂಕಿನ ಕಸ್ಬಾ ಗ್ರಾಮದ ಶಾಂತಿನಗರದಲ್ಲಿ ಸಂಪತಕುಮಾರ ಹತ್ಯೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಐವರನ್ನ ಬಂಧಿಸಿದ್ದಾರೆ

ಬಂಧಿತ ಐವರು ಸುಳ್ಯ ತಾಲೂಕಿನ‌ ಸಂಪಾಜೆ ಗ್ರಾಮದ ಕಲ್ಲುಗುಂಡಿಯವರಾಗಿದ್ದಾರೆ. ಭಾನುವಾರ ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಮುಂಗ್ಲಿಪಾದೆ ಎಂಬಲ್ಲಿ ಕೆಎ ೧೨, ಎಂ ಎ ೪೩೮೫ ಸಂಖ್ಯೆಯ ಸ್ವಿಪ್ಟ್ ಕಾರಲ್ಲಿ ತೆರಳುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅವರನ್ನ ಪತ್ತೆ ಮಾಡಿದ್ದಾರೆ. 

ಈಗಾಗಲೇ ಕೃತ್ಯಕ್ಕೆ ಬಳಸಿದ  ಕ್ವಾಲಿಸ್ ಕಾರು ಕೆಎ ೧೯, ಎಂಎಪ್ ೭೮೯ ವಾಹನವನ್ನ ಸ್ವಾಧೀನಪಡಿಸಿಕೊಳ್ಳಲಾಗಿದೆ. 

 ಕೊಲೆಯಾದ ಸಂಪತ್  2019 ನೇ ಸಾಲಿನಲ್ಲಿ ಮಡಿಕೇರಿ ಯಲ್ಲಿ ನಡೆದ ಕಳಗಿ ಬಾಲಚಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದು ಪ್ರಸ್ತುತ ಜಾಮೀನು ಪಡೆದು ಶಾಂತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆರೋಪಿತರು ಕಳಗಿ ಬಾಲಚಂದ್ರ ಅವರನ್ನು ಸಂಪತ್ ಕೊಲೆ ಮಾಡಿರುವ ಬಗ್ಗೆ ದ್ವೇಷದಿಂದ ಈ ಕೃತ್ಯವನ್ನು ಎಸಗಿರುವುದಾಗಿ ತಿಳಿದುಬಂದಿದೆ.

ಸುಳ್ಯ ಸಿಪಿಐ  ನವೀನ್ ಚಂದ್ರ ಜೋಗಿ ರವರ ನೇತೃತ್ವದಲ್ಲಿ ಪಿಎಸ್ಐ ಹರೀಶ್ ಮತ್ತು ಡಿಸಿಐಬಿ ತಂಡ ಪತ್ತೆ ಕಾರ್ಯ ನಡೆಸಿದ್ದು ತನಿಖೆ ಮುಂದುವರಿಸಿದ್ದಾರೆ.

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...