ಭಟ್ಕಳ ಸೇರಿದಂತೆ ಉ.ಕ.ಜಿಲ್ಲೆಯ 5ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

Source: sonews | By Staff Correspondent | Published on 25th October 2019, 10:40 PM | Coastal News | Don't Miss |

ಕಾರವಾರ: ತೀವ್ರ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಕರಾವಳಿಯ ಐದು ತಾಲೂಕುಗಳಲ್ಲಿ ಎಲ್ಲ ಶಾಲಾ ಕಾಲೇಜುಗಳು ಹಾಗೂ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಕೆ. ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ಕಾರವಾರ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸುವಂತೆ ಹಾಗೂ ನಾಳೆ ಶನಿವಾರದ ತರಗತಿಯನ್ನು ಬೇರೊಂದು ದಿನ ಸರಿದೂಗಿಸುವಂತೆ ಬಿಇಒಗಳಿಗೆ ಸೂಚಿಸಿ ಡಿಡಿಪಿಐ ಎನ್.ಜಿ.ನಾಯಕ್ ಆದೇಶಿಸಿದ್ದಾರೆ.

ಭಟ್ಕಳ ತಾಲೂಕಿನಾದ್ಯಂತ ಗಾಳಿ ಸಹಿತ ಭೀಕರ ಮಳೆ ಸುರಿಯುತ್ತಿದ್ದು ನಾಳೆಯೂ ಮಳೆ ಮುಂದುವರಿಯುವ ಕುರಿತು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದು ಇರುತ್ತದೆಕಾರಣ ಮುಂಜಾಗ್ರತಾ ಕ್ರಮವಾಗಿ ಮಾನ್ಯ ಸಹಾಯಕ ಆಯುಕ್ತರು ಹಾಗೂ ಮಾನ್ಯ ತಹಶೀಲ್ದಾರರು ಭಟ್ಕಳರವರ ಆದೇಶದಂತೆ ನಾಳೆ ದಿನಾಂಕ: 26-10-2019 ರಂದು ಶನಿವಾರ ಭಟ್ಕಳ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ರಜೆಯ ಅವಧಿಯನ್ನು  ಮುಂದಿನ ಶನಿವಾರ ಪೂರ್ಣದಿನ ತರಗತಿ ನಡೆಸಿ ಸರಿದೂಗಿಸುವುದು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...