ಶಿರಸಿ ಸಿಪಿಐ ಗಿರೀಶ ಪೂರ್ವಾಗೃಹ ಪೀಡಿತರಾಗಿದ್ದಾರೆ: ಎಸ್‍ಡಿಪಿಐ

Source: S O News Service | By I.G. Bhatkali | Published on 16th October 2019, 6:12 PM | Coastal News | Don't Miss |

ಭಟ್ಕಳ: ಶಿರಸಿಯ ಸಿಪಿಐ ಗಿರೀಶ ಎಸ್‍ಡಿಪಿಐ ವಿರುದ್ಧ ಪೂರ್ವಾಗೃಹ ಪೀಡಿತರಾಗಿ ವರ್ತಿಸುತ್ತಿದ್ದಾರೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ( ಎಸ್‍ಡಿಪಿಐ)ದ ಜಿಲ್ಲಾ ಅಧ್ಯಕ್ಷ ತೌಫಿಕ್ ಬ್ಯಾರಿ ಆರೋಪಿಸಿದ್ದಾರೆ.

ಅವರು ಮಂಗಳವಾರ ಭಟ್ಕಳದಲ್ಲಿರುವ ಎಸ್‍ಡಿಪಿಐ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶಿರಸಿಯ ಯುವಕ ಮುಸನ್ನಿಫ್ ಎಂಬಾತ ತನ್ನ ಗೆಳೆಯನ ವಾಹನದ ಇನ್ಶೂರೆನ್ಸ್ ಪ್ರತಿಯನ್ನು ಹಾಜರುಪಡಿಸಲು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ಅಲ್ಲಿನ ಸರ್ಕಲ್ ಇನ್‍ಸ್ಪೆಕ್ಟರ್ ಗಿರೀಶ, ಆತನನ್ನು ತನ್ನ ಕೋಣೆಗೆ ಕರೆದು ಆತನ ಮೊಬೈಲ್‍ನ್ನು ಪಡೆದುಕೊಂಡು ಅದರಲ್ಲಿದ್ದ ಎಸ್‍ಡಿಪಿಐ ಕಾರ್ಯಕ್ರಮಗಳ ಪೋಟೋ ನೋಡಿದ್ದಾರೆ. `ಇನ್ನೂ ನೀನು ಎಸ್‍ಡಿಪಿಐನಲ್ಲಿದ್ದೀಯಾ, ಶಿರಸಿಯಲ್ಲಿ ಎಸ್‍ಡಿಪಿಐನ್ನು ನಡೆಸಲು ನಾನು ಬಿಡುತ್ತೇನೆ ಎಂದುಕೊಂಡಿದ್ದೀಯಾ ಎಂದು ಬೆದರಿಸಿದ್ದಲ್ಲದೇ, ಇಬ್ಬರು ಪೊಲೀಸ್ ಪೇದೆಗಳನ್ನು ಸೇರಿಸಿಕೊಂಡು ದೈಹಿಕವಾಗಿಯೂ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ಅಲ್ಲಿಂದ ಮಾರುಕಟ್ಟೆ ಪೊಲೀಸ್ ಠಾಣೆಗೆ ಕಳುಹಿಸಿ ಸಾಯಂಕಾಲದವರೆಗೆ ಇರಿಸಿಕೊಳ್ಳಲಾಗಿದೆ. ಅಲ್ಲದೇ ಮುಸನ್ನಿಫ್ ವಿರುದ್ಧ ಐಪಿಸಿ ಸೆಕ್ಷನ್ 110ನ್ನು ಸಹ ದಾಖಲಿಸಲಾಗಿದೆ. ಸದರಿ ಮುಸನ್ನಿಫ್ ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಪೊಲೀಸ್ ದೌರ್ಜನ್ಯದಿಂದ ಇನ್ನಷ್ಟು ಘಾಸಿಗೊಂಡು ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಪಿಐ ಗಿರೀಶ ಈ ಹಿಂದೆಯೂ ಇಂತಹುದ್ದೇ ವರ್ತನೆ ತೋರಿದ್ದಾರೆ. ಈ ಕೂಡಲೇ ಅವರನ್ನು ಅಮಾನತ್ತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿವರಿಸಿದರು. ಎಸ್‍ಡಿಪಿಐ ಭಟ್ಕಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ವಾಸೀಮ್, ಜಲಾಲುದ್ದೀನ್ ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...