ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಸುರಕ್ಷತೆಯ ಲೋಪದೋಷ: ಕಳೆದ ಜುಲೈನಲ್ಲಿ ಶೋಕಾಸ್ ನೊಟೀಸ್ ನೀಡಿದ್ದ ಡಿಜಿಸಿಎ!

Source: PTI | Published on 8th August 2020, 7:18 PM | National News | Don't Miss |

ನವದೆಹಲಿ: ಭಾರತೀಯ ವಿಮಾನಯಾನ ಪ್ರಾಧಿಕಾರ ಡಿಜಿಸಿಎ(Director General of Civil Aviation) ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈ 11ರಂದು ವಿಮಾನ ನಿಲ್ದಾಣ ನಿರ್ದೇಶಕರಿಗೆ ಶೋಕಾಸ್ ನೊಟೀಸ್ ಹೊರಡಿಸಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿದೆ. 
ಕೋಝಿಕ್ಕೋಡ್ ರನ್ ವೇಯಲ್ಲಿ ಬಿರುಕು ಮೂಡಿದೆ, ನೀರು ನಿಲುಗಡೆಯಾಗುತ್ತದೆ ಮತ್ತು ಅಧಿಕ ರಬ್ಬರ್ ಶೇಖರಣೆಯಾಗುತ್ತದೆ ಎಂಬಿತ್ಯಾದಿ ಲೋಪದೋಷಗಳ ಪಟ್ಟಿ ಮಾಡಿ ಶೋಕಾಸ್ ನೊಟೀಸನ್ನು ಡಿಜಿಸಿಎ ಕೊಟ್ಟಿತ್ತು. ಕಳೆದ ವರ್ಷ ಜುಲೈ 2ರಂದು ಸೌದಿ ಅರೇಬಿಯಾದ ಡಮ್ಮನ್ ನಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ಆಗುವ ವೇಳೆ ಡಿಜಿಸಿಎ ತಪಾಸಣೆ ನಡೆಸಿತ್ತು ಎಂಬ ಮಾಹಿತಿ ಕೂಡ ನಿನ್ನೆ ಅಪಘಾತದ ಬಳಿಕ ಹೊರಬಿದ್ದಿದೆ.
ಇದಾಗಿ ಸರೀ ಒಂದು ವರ್ಷಕ್ಕೆ ನಿನ್ನೆ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಪಘಾತಕ್ಕೀಡಾಗಿ ಹತ್ತಾರು ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಅದರಲ್ಲಿ ವಿಮಾನದ ಇಬ್ಬರು ಪೈಲಟ್ ಗಳೂ ಸೇರಿದ್ದಾರೆ. 
ಕಳೆದ ವರ್ಷ ಜುಲೈ 2ರ ಘಟನೆ ಬಳಿಕ ಡಿಜಿಸಿಎ ಅಧಿಕಾರಿಗಳು ಮತ್ತೆ ಎರಡು ದಿನ ಬಿಟ್ಟು ಅಂದರೆ ಕಳೆದ ವರ್ಷ ಜುಲೈ 4 ಮತ್ತು 5ರಂದು ಕೋಝಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿ ಕೂಲಂಕಷ ತಪಾಸಣೆ ಮಾಡಿದ್ದರು, ಆಗ ರನ್ ವೇಯಲ್ಲಿ ಹಲವು ಸುರಕ್ಷತಾ ಲೋಪದೋಷಗಳಿವೆ ಎಂಬುದು ಗಮನಕ್ಕೆ ಬಂದಿತ್ತು. ಅದಾಗಿ ಜುಲೈ 11ರಂದು ಕಳೆದ ವರ್ಷ ನಿಲ್ದಾಣದ ನಿರ್ದೇಶಕ ಕೆ ಶ್ರೀನಿವಾಸ್ ರಾವ್ ಅವರಿಗೆ ಶೋಕಾಸ್ ನೊಟೀಸ್ ನೀಡಲಾಗಿತ್ತು ಎಂದು ಡಿಜಿಸಿಎ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.
ಶೋಕಾಸ್ ನೊಟೀಸ್ ನೀಡಿದ ನಂತರ ನಿರ್ದೇಶಕ ಶ್ರೀನಿವಾಸ್ ರಾವ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಅವರಿಗೆ ನೀಡಲಾಗಿದ್ದ ಶೋಕಾಸ್ ನೊಟೀಸ್ ನ ಪ್ರತಿ ಪಿಟಿಐ ಸುದ್ದಿಸಂಸ್ಥೆಗೆ ಲಭ್ಯವಾಗಿದೆ. ಅದರಲ್ಲಿ ರನ್ ವೇ 28, ರನ್ ವೇ 10ರ ಎಡ, ಬಲ ಭಾಗಗಳಲ್ಲಿ ಭೂ ಸ್ಪರ್ಶ ವಲಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ವಿಮಾನ ಭೂ ಸ್ಪರ್ಶ ಮಾಡುವ ಮೊದಲ ಮೇಲ್ಮೈ ಆಗಿದೆ. ಭೂಸ್ಪರ್ಶ ವಲಯದ ಎಡಬದಿಗಳಲ್ಲಿ ಮೂರು ಮೀಟರ್ ವರೆಗೆ ಅಧಿಕ ರಬ್ಬರ್ ಶೇಖರಣೆಯಾಗಿದೆ. 1.5 ಮೀಟರ್ ಉದ್ದದವರೆಗೆ ನೀರು ನಿಂತುಕೊಂಡಿದೆ, ವಿಮಾನ ನಿಲ್ದಾಣದಲ್ಲಿ ಹಲವು ಬಿರುಕುಗಳಿವೆ, ಆಪ್ರೊನ್ ಮೇಲ್ಮೈಯ(ವಿಮಾನ ಬಂದು ನಿಲ್ಲುವ, ಇಂಧನ ತುಂಬಿಸುವ, ಪ್ರಯಾಣಿಕರು ಹತ್ತಿಳಿಯುವ ಸ್ಥಳ) 111 ಮೀಟರ್ ನಷ್ಟು ಉದ್ದಕ್ಕೆ ಹಾನಿಯಾಗಿದೆ ಎಂದು ಕೂಡ ಶೋಕಾಸ್ ನೊಟೀಸ್ ನಲ್ಲಿ ಹೇಳಲಾಗಿದೆ. 
ವಿಮಾನ ಸಂಖ್ಯೆ 1 ರ ಹಿಂದಿನ ಆಪ್ರೊನ್ ಪ್ರದೇಶದ ಹಿಂದೆ ಸರಿಸುಮಾರು ಐದು ಅಡಿ ಆಳದ ಕಡಿದಾದ ಕೆಳಕ್ಕೆ ಇಳಿಜಾರು ಕಂಡುಬರುತ್ತದೆ, ಅದನ್ನು ನೆಲಸಮ ಮತ್ತು ಶ್ರೇಣೀಕರಿಸುವ ಅಗತ್ಯವಿದೆ, ಹೀಗೆ ಹತ್ತಾರು ಲೋಪದೋಷಗಳನ್ನು ಅದರಲ್ಲಿ ಗುರುತಿಸಲಾಗಿದೆ. 
ಏರ್ ಇಂಡಿಯಾದ ಉಪ ಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ದುರಂತ ಹಿನ್ನೆಲೆಯಲ್ಲಿ ಇಂದು ರಕ್ಷಣಾ ಕಾರ್ಯಕ್ಕೆ ಮೂರು ರಕ್ಷಣಾ ವಿಮಾನಗಳನ್ನು ಕಳುಹಿಸಲಾಗಿದೆ. 
ಕೋವಿಡ್-19 ಹಿನ್ನೆಲೆಯಲ್ಲಿ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿತ್ತು. ಆದರೆ ವಿಶೇಷ ಸಹಾಯದಡಿ ವಂದೇ ಭಾರತ್ ಯೋಜನೆಯಡಿ ಮೇ 6ರಿಂದ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರಿಗೆ ದೇಶಕ್ಕೆ ಬರಲು ಅನುಕೂಲವಾಗಲು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಕಳುಹಿಸುತ್ತಿದೆ. ಈ ಯೋಜನೆಯಡಿ ಕೆಲವು ಖಾಸಗಿ ವಿಮಾನಗಳು ಕೂಡ ಹಾರಾಟ ಮಾಡುತ್ತಿವೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...