ಕಿತ್ರೆ ಕ್ರಾಸ್ ಹತ್ತಿರ ಗಾಂಜಾ ಮಾರಾಟ. ಭಟ್ಕಳ ಪೊಲೀಸರಿಂದ ಮೂವರ ಬಂಧನ.

Source: SO News | By Laxmi Tanaya | Published on 17th September 2020, 10:50 PM | Coastal News | Don't Miss |

ಭಟ್ಕಳ : ಪಟ್ಟಣದ ಸಾಗರ ರಸ್ತೆಯ ಕಿತ್ರೆ ಕ್ರಾಸ್ ಹತ್ತಿರ ಗಾಂಜಾ  ಮಾರಾಟ ಮಾಡುತ್ತಿದ್ದ ಭಟ್ಕಳದ ಮೂವರನ್ನ ಪೊಲೀಸರ ಬಂಧಿಸಿದ್ದಾರೆ. ಬಂಧಿತರಿಂದ  ಸುಮಾರು 750 ಗ್ರಾಂ ತೂಕದ ಗಾಂಜಾ ಹಾಗೂ 1 ಸ್ಕೂಟಿ, 3 ಮೊಬೈಲ್,   2700 ರೂ ನಗದು ಹಣ ವಶಪಡಿಸಿಕೊಳ್ಳಲಾಗಿದೆ.

ಮಂಕಿಯ  ಗಣಪತಿ ಮಂಜಪ್ಪ ನಾಯ್ಕ,  ಮುರ್ಡೇಶ್ವರದ ಜನಾರ್ಧನ ಅಣ್ಣಪ್ಪ ಹರಿಕಂತ್ರ,  ಕರಿಕಲ್ ನ ಆನಂದ ಮಾದೇವ ಮೊಗೇರ ಬಂಧಿತರಾಗಿದ್ದಾರೆ.

ಕಾರ್ಯಾಚರಣೆಯನ್ನು  ಶಿವಪ್ರಕಾಶ ದೇವರಾಜ ಹಾಗೂ  ಎಸ್ ಬದ್ರೀನಾಥ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ ರವರ ಮಾರ್ಗದರ್ಶನದಲ್ಲಿ  ನಿಖಿಲ್ ಬಿ. ಸಹಾಯಕ ಪೊಲೀಸ್ ಅಧೀಕ್ಷಕರು ಭಟ್ಕಳ ಉಪವಿಭಾಗ ರವರ ನೇತೃತ್ವದಲ್ಲಿ  ದಿವಾಕರ್ ಪಿ.ಎಮ್ ಸಿ.ಪಿ.ಐ ಭಟ್ಕಳ ಮುಂದಾಳತ್ವದಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿಎಸ್ಐ  ಓಂಕಾರಪ್ಪ, ಭಟ್ಕಳ ಶಹರ ಪೊಲೀಸ್ ಠಾಣೆಯ ಪಿಎಸ್ಐ  ಭರತಕುಮಾರ ವಿ.  ಹೆಚ್ ಬಿ ಕುಡಗುಂಟಿ ಮಾಡಿದ್ದರು.

ಎಎಸ್ಐ ರಾಮಚಂದ್ರ ನಾಯಕ, ಸಿಬ್ಬಂದಿಗಳಾದ  ದಿನೇಶ ನಾಯಕ, ಲೊಕೇಶ ಕತ್ತಿ, ಈರಣ್ಣ ಪೂಜೇರಿ, ರಾಜು ಗೌಡಾ, ದೀಪಕ ಎಸ್ ನಾಯ್ಕ, ನಾಗರಾಜ ಮೂಗೇರ, ವಿನಾಯಕ ಪಾಟೀಲ್, ಗಣೇಶ ಗಾಂವಕರ, ಮಕ್ತುಮ್ ಪತ್ತೇಖಾನ್, ಗೌತಮ್ ರೊಡ್ಡನವರ, ಮಲ್ಲಿಕಾರ್ಜುನ ಉಟಗಿ, ಸಚೀನ್ ಪವಾರ, ಮಲ್ಲಿಕಾರ್ಜುನ ನಾಯ್ಕ, ಅಶೋಕ ನಾಯ್ಕ, ದೇವು ಆರ್ ನಾಯ್ಕ, ರಾಮಚಂದ್ರ ಕಜ್ಜಿದೊಣ್ಣಿ, ವಿಶೇಷ ತಂಡದ ಸಿಬ್ಬಂದಿಯವರಾದ ಸಂತೋಷ ಹೊನ್ನಾಳ, ಮೋಹನ ಪೂಜಾರಿ, ಚಾಲಕರಾದ ದೇವರಾಜ ಮೂಗೇರ, ಕುಬೇರ ಹೊಸುರ ಇವರು ಹಾಜರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...