ವಿಧಾನಪರಿಷತ್‌ನ 7 ಸ್ಥಾನಗಳಿಗೆ ಅವಿರೋಧ ಆಯ್ಕೆ

Source: Vb | By I.G. Bhatkali | Published on 28th May 2022, 3:42 PM | State News |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಜೂ.3ರಂದು ನಿಗದಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಶುಕ್ರವಾರ ಘೋಷಿಸಿದರು.

ಮೇ 24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿತ್ತು ಎಂದು ಅವರು ತಿಳಿಸಿದರು. ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಶಾಲಾಕ್ಷಿ ಹೇಳಿದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್ ಹಾಗೂ ಎಸ್.ಕೇಶವಪ್ರಸಾದ್, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಂ.ನಾಗರಾಜ ಯಾದವ್ ಮತ್ತು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಟಿ.ಎ. ಶರವಣ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿ ದ್ದಾರೆ ಎಂದು ಅವರು ಪ್ರಕಟಿಸಿದರು. ಇಂದು ನಾಮ ಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾ ವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.

Read These Next

1 ವರ್ಷದಲ್ಲಿ 30 ಡಯಾಲಿಸಿಸ್ ರೋಗಿಗಳ ಸಾವು! ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ವಿರುದ್ಧ ರೋಗಿಗಳ ಗಂಭೀರ ಆರೋಪ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಖಾಸಗಿಯವರಿಗೆ ಗುತ್ತಿಗೆಗೆ ನೀಡಿರುವ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆಯಿಂದ ಕಳೆದ ಒಂದು ...

ಮೈಸೂರು ಜಿಲ್ಲೆಯ ಟಿ.ನರಸಿಪುರದಲ್ಲಿ ಭೀಕರ ರಸ್ತೆ ಅಪಘಾತ; ೧೦ ಮಂದಿ ಸಾವು, ಮೃತರಿಗೆ ೨ಲಕ್ಷ ರೂ ಪರಿಹಾರ ಘೋಷಿಸಿದ ಸಿ.ಎಂ

ಮೈಸೂರು: ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ...

ಇಂದು ಸಂಪುಟ ವಿಸ್ತರಣೆ; 24 ಮಂದಿಗೆ ಸಚಿವ ಸ್ಥಾನ; ಇಂದು ಪ್ರಮಾಣ ವಚನ; ದೇಶಪಾಂಡೆ, ಹರಿಪ್ರಸಾದ್, ಸವದಿ, ಶೆಟ್ಟರ್ ಪಟ್ಟಿಯಲ್ಲಿ ಇಲ್ಲ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಎರಡು ದಿನಗಳಿಂದ ಹೊಸದಿಲ್ಲಿಯಲ್ಲಿ ನಡೆಯುತ್ತಿದ್ದ ಪ್ರಕ್ರಿಯೆ ಅಂತಿಮಗೊಂಡಿದ್ದು, 24 ಮಂದಿ ...