ಶಾಹೀನ್ ಬಾಗ್ ಪ್ರತಿಭಟನಾಕಾರರ ಕುರಿತಂತೆ ಬಿಜೆಪಿ ಸಂಸದನಿಂದ ಅವಹೇಳನಕಾರಿ ಹೇಳಿಕೆ

Source: sonews | By Staff Correspondent | Published on 28th January 2020, 3:46 PM | National News | Don't Miss |

ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದದ್ದೇ ಆದಲ್ಲಿ ಶಹೀನ್ ಬಾಗ್ ಪ್ರದೇಶದಲ್ಲಿ ಕಳೆದ ಹಲವಾರು ವಾರಗಳಿಂದ ಧರಣಿ ಕುಳಿತಿರುವ ಪೌರತ್ವ ಕಾಯಿದೆ ವಿರೋಧಿ ಪ್ರತಿಭಟನಾಕಾರರನ್ನು ಒಂದೇ ಗಂಟೆಯೊಳಗೆ ತೆರವುಗೊಳಿಸಲಾಗುವುದು ಎಂದು  ಪಶ್ಚಿಮ ದಿಲ್ಲಿಯ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮ ಹೇಳಿದ್ದಾರೆ.

``ಇದು ಕೇವಲ ಇನ್ನೊಂದು ಚುನಾವಣೆಯಲ್ಲ.  ಇದು ದೇಶದ ಏಕತೆಯನ್ನು ನಿರ್ಧರಿಸುವ ಚುನಾವಣೆ. ಬಿಜೆಪಿ ಫೆಬ್ರವರಿ 11ರಂದು ಅಧಿಕಾರಕ್ಕೆ ಬಂದರೆ  ಅಲ್ಲಿ ಒಂದು ಗಂಟೆಯೊಳಗೆ ಒಬ್ಬನೇ ಒಬ್ಬ ಪ್ರತಿಭಟನಕಾರ ಇರುವುದಿಲ್ಲ. ಇನ್ನೊಂದು ತಿಂಗಳಲ್ಲಿ ಸರಕಾರಿ  ಜಮೀನಿನಲ್ಲಿ ನಿರ್ಮಿಸಲ್ಪಟ್ಟ ಒಂದೇ ಒಂದು ಮಸೀದಿಯನ್ನು ಉಳಿಯಲು ಬಿಡುವುದಿಲ್ಲ'' ಎಂದು ವರ್ಮ ಹೇಳಿದ್ದಾರೆ.

"ಅಲ್ಲಿ (ಶಾಹೀನ್ ಬಾಘ್) ಲಕ್ಷಗಟ್ಟಲೆ ಜನ ಸೇರುತ್ತಾರೆ. ಅವರು ನಿಮ್ಮ ಮನೆಗಳಿಗೆ ನುಗ್ಗಿ ನಿಮ್ಮ ಸೋದರಿಯರು, ಪುತ್ರಿಯರ ಮೇಳೆ ಅತ್ಯಾಚಾರಗೈದು ಕೊಲ್ಲುತ್ತಾರೆ.  ಇಂದು ಸಮಯವಿದೆ. ನಾಳೆ ನಿಮ್ಮನ್ನು ಬಚಾವ್ ಮಾಡಲು ಮೋದೀ ಜಿ ಹಾಗೂ ಅಮಿತ್ ಶಾ ಬರುವುದಿಲ್ಲ''ಎಂದೂ ಅವರು ಹೇಳಿದ್ದು, ಭಾರೀ ವಿವಾದ ಸೃಷ್ಟಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...