ಶಾರ್ಜಾ:ನವೆಂಬರ್ 17ರಂದು ಕರ್ನಾಟಕ ರಾಜ್ಯೋತ್ಸವ, ಮಯೂರ ಪ್ರಶಸ್ತಿ ಪ್ರದಾನ

Source: ganesh rai | By Arshad Koppa | Published on 9th October 2017, 8:17 AM | Gulf News | Special Report |

ಕರ್ನಾಟಕ ರಾಜ್ಯೋತ್ಸವ ಸಮಾರಂಭ ಕರ್ನಾಟಕ ಸಂಘ ಶಾರ್ಜಾ ತನ್ನ 15ನೇ ವಾರ್ಷಿಕೋತ್ಸವ ಮತ್ತು ಮಯೂರ ಪ್ರಶಸ್ತಿ ಪ್ರಧಾನ ಸಮಾರಂಭ 2017 ನವೆಂಬರ್ 17ನೇ ತಾರೀಕು ಶುಕ್ರವಾರ ಸಂಜೆ 4.00 ಗಂಟೆಯಿಂದ ಶಾರ್ಜಾ ಇಂಡಿಯನ್ ಅಸೋಸಿಯೇಶನ್ ಬೃಹತ್ ಸಭಾಂಗಣದಲ್ಲಿ ಅಯೋಜಿಸಲಾಗಿದೆ. 

"ಮಯೂರ ನಾಟ್ಯ ಮಂಜರಿ" ಯು.ಎ.ಇ. ಮಟ್ಟದ ಕನ್ನಡ ಸಮೂಹ ನೃತ್ಯ ಸ್ಪರ್ಧೆ
ಯು.ಎ.ಇ.ಯಲ್ಲಿ ಕಾರ್ಯಪ್ರವೃತ್ತವಾಗಿರುವ ಕರ್ನಾಟಕ ಪರ ಸಂಘಟನೆಗಳ ನೃತ್ಯ ತಂಡಗಳಿಗೆ ಯು.ಎ.ಇ. ಮಟ್ಟದಲ್ಲಿ ಕನ್ನಡ ಸಮೂಹ ನೃತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಜಯಿ ತಂಡ "ಮಯೂರ ನಾಟ್ಯ ಮಂಜರಿ" ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳಲಿದೆ. ಸ್ಪರ್ಧೆಯಲ್ಲಿ ಕನ್ನಡ, ತುಳು, ಕೊಂಕಣ , ಕೊಡವ, ಬ್ಯಾರಿ ಭಾಷಿಗರು ಭಾಗವಹಿಸಲಿದ್ದು, ತಂಡದಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿ ಕನಿಷ್ಟ ಎಂಟು ಮಂದಿ ಗರಿಷ್ಠ ಹತ್ತು ಮಂದಿ ಭಾಗವಹಿಸಬಹುದಾಗಿದೆ. ಐದರಿಂದ ಏಳು ನಿಮಿಷದ ಅವಧಿಯ ಕನ್ನಡ ಸಮೂಹ ನೃತ್ಯಗಳಿಗೆ ಮಾತ್ರ ಅವಕಾಶವಿದ್ದು ಶಾಸ್ತ್ರೀಯ, ಅರೆಶಾಸ್ತ್ರೀಯ, ಜಾನಪದ, ಪಾಶ್ಚಾತ್ಯ, ಸಿನಿಮ್ಯಾಟಿಕ್ ಸಮೂಹ ನೃತ್ಯದ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಪ್ರತಿಷ್ಠಿತ "ಮಯೂರ ಪ್ರಶಸ್ತಿ" ಪ್ರದಾನ ಸಮಾರಂಭ


ಅಹ್ವಾನಿತ ಅತಿಥಿಗಳು, ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಕರ್ನಾಟಕ ಸಂಘ ಶಾಜಾ ಪ್ರತಿವರ್ಷ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಸಾಧನೆ ಮಾಡಿರುವ ಕನ್ನಡಿಗರನ್ನು ಗುರುತಿಸಿ ನೀಡಲಾಗುತಿರುವ ಪ್ರತಿಷ್ಠಿತ "ಮಯೂರ ಪ್ರಶಸ್ತಿ" ಪ್ರಧಾನ ಸಮಾರಂಭ ಸಂಜೆ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ ನಡೆಯಲಿದೆ.
ಕಿರು ಯಕ್ಷಗಾನ ಪ್ರದರ್ಶನ ಮತ್ತು ಹಾಸ್ಯ, ಪ್ರಹಸನಗಳೊಂದಿಗೆ ನಡೆಯಲಿರುವ ಕನ್ನಡ ಹಬ್ಬಕ್ಕೆ ಸಮಸ್ಥ ಅನಿವಾಸಿ ಕನ್ನಡಿಗರಿಗೆ ಸರ್ವ ಸದಸ್ಯರ ಪರವಾಗಿ ಕರ್ನಾಟಕ ಸಂಘ ಶಾರ್ಜಾ ಅಧ್ಯಕ್ಷರಾದ ಶ್ರೀ ಸುಗಂಧರಾಜ್ ಬೇಕಲ್  ಮಾಧ್ಯಮದ ಮೂಲಕ  ಆಹ್ವಾನಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ : ಸಂಪರ್ಕಿಸಿ  050-1540471
-ಮಾಧ್ಯಮ ವರದಿ

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...