ಕಡ್ಡಾಯ ಕಾಲು,ಬಾಯಿ ರೋಗ ಲಸಿಕೆಗೆ ಜಿಲ್ಲಾಧಿಕಾರಿ ಸೂಚನೆ

Source: so news | Published on 5th October 2019, 12:17 AM | State News | NewsVoir |

 

ಹಾಸನ: ಜಿಲ್ಲೆಯಾದ್ಯಂತ ಅ.14 ರಿಂದ ನವೆಂಬರ್.4 ರವರೆಗೆ ನಡೆಯುವ 16ನೇ ಸುತ್ತಿನ ಸಾಮೂಹಿಕ ಕಾಲು, ಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಎಲ್ಲಾ ಜಾನುವಾರುಗಳಿಗೆ ಯಾವುದೇ ಲೋಪದೋಷವಿಲ್ಲದಂತೆ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಪಶು ಪಾಲಾನಾ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು 16 ನೇ ಸುತ್ತಿನ ಸಾಮೂಹಿಕ ಕಾಲು ಮತ್ತು ಬಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆ ನಡೆಸಿ ಮಾತನಾಡಿದ ಅವರು ದನ, ಎಮ್ಮೆ, ಕುರಿ, ಮೇಕೆ, ಹಂದಿಗಳಂತಹ ಸಾಕು ಪ್ರಾಣಿಗಳಲ್ಲಿ ವೈರಸ್ ನಿಂದ ಉಂಟಾಗುವ ರೋಗವನ್ನು ನಿಯಂತ್ರಣಕ್ಕೆ ತರುವಲ್ಲಿ ಪಶು ಸಂಗೋಪನಾ ಇಲಾಖೆಯು ಹೆಚ್ಚಿನ ಗಮನಹರಿಸಬೇಕು ಎಂದರು.
ಜಾನುವಾರುಗಳಲ್ಲಿ ರೋಗ ನಿರ್ಮೂಲನೆ ಮಾಡಲು ಸಾಮೂಹಿಕ ರೋಗ ನಿರೋಧಕ ಲಸಿಕೆಯನ್ನು ಹಾಕುವ ಮೂಲಕ ಪ್ರಾಣಿಜನ್ಯ ಉತ್ಪನ್ನಗಳಲ್ಲಿ ಗುಣಮಟ್ಟದ ದೋಷಗಳು ಉಂಟಾಗದಂತೆ  ನಿಗಾವಹಿಸಿ ಎಂದು ಪಶು ಸಂಗೋಪನಾ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಬಯಲು ಪ್ರದೇಶಗಳಲ್ಲಿ 100 ರಿಂದ 120 ರಾಸುಗಳಿಗೆ ಒಂದು ಬ್ಲಾಕ್‍ನಂತೆ ಮಲೆನಾಡು ಪ್ರದೇಶದಲ್ಲಿ 60 ರಿಂದ 70 ರಾಸುಗಳಿಗೆ ಒಂದು ಬ್ಲಾಕ್ ನಂತೆ ಪಟ್ಟಿ ಮಾಡಿ ಪರಿಷ್ಕರಿಸಿ ಲಸಿಕಾ ಕಾರ್ಯಕ್ರಮಕ್ಕೆ ಕ್ರಮ ಕೈಗೊಳ್ಳಬೇಕು ಯಾವುದೇ ಜಾನುವಾರುಗಳು ಇದರಿಂದ ಹೊರಗುಳಿಯದಂತೆ ಮುಂಜಾಗೃತೆ ವಹಿಸಿ ಎಂದರಲ್ಲದೇ, ಜಿಲ್ಲಾ ಹಾಲು ಒಕ್ಕೂಟದಿಂದ 40 ವಾಹನಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಬಾರ ಅಪರ ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಡಾ. ಹೆಚ್.ಎಲ್ ನಾಗರಾಜ್ ಅವರು ಮಾತನಾಡಿ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯವಿರುವ ಲಸಿಕೆ, ಸಿರಿಂಜ್‍ಗಳು, ನೀಡಲ್‍ಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕು ಎಂದರು.
ಪ್ರತಿ 6 ತಿಂಗಳಿಗೊಮ್ಮೆ ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಯನ್ವರ ದನ, ಎಮ್ಮೆ ಮತ್ತು ಹಂದಿಗಳಿಗೆ ಸಾಮೂಹಿಕವಾಗಿ ಕಾಲು ಬಾಯಿ ಜ್ವರ ರೋಗ ನಿರೋಧಕ ಲಸಿಕೆಯನ್ನು ಹಾಕಬೇಕು, ಈ ಸಂಬಂಧ ರೈತರಿಗೆ, ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸಿ ಎಂದು ತಿಳಿಸಿದರು. 
ಪಶು ಸಂಗೋಪನಾ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾದ ಜಾನಕಿ ಅವರು ಮಾತನಾಡಿ ಜಿಲ್ಲೆಯಲ್ಲಿ ವಾಸ್ತವವಾಗಿರುವ ದನ, ಎಮ್ಮೆ ಮತ್ತು ಹಂದಿಗಳಿಗೂ ಕಡ್ಡಾಯವಾಗಿ ಕಾಲು ಮತ್ತು ಬಾಯಿ ಜ್ವರ ರೋಗದ ವಿರುದ್ದ ಲಸಿಕೆ ಹಾಕಲು ಈಗಾಗಲೇ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಲಸಿಕಾ ಕಾರ್ಯಕ್ರಮಕ್ಕೆ  ಜಿಲ್ಲೆಯ ಒಟ್ಟು 212 ಪಶು ವೈದ್ಯಕೀಯ ಸಂಸ್ಥೆಗಳು, ಕಾರ್ಯ ನಿರ್ವಹಿಸುತ್ತಿರುವ ಪಶುವೈದ್ಯಾಧಿಕಾರಿಗಳು, ಜಾನುವಾರು ಅಧಿಕಾರಿಗಳು, ಹಿರಿಯ ಪಶುವೈದ್ಯಾಧಿಕಾರಿಗಳು, ಪಶು ವೈದ್ಯಕೀಯ ಪರೀಕ್ಷಕರು, ಪಶುವೈದ್ಯಕೀಯ ಸಹಾಯಕರು ಹಾಗೂ ತರಬೇತಿ ಮೀಡಲಾಗಿರುವ ಡಿ.ದರ್ಜೆ ನೌಕರರನ್ನು ಲಸಿಕಾ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. 
ನಬಾರ್ಡ್‍ನ ಸಹಾಯಕ ವ್ಯವಸ್ಥಾಪಕರಾದ ವಿ.ಜಿ.ಭಟ್, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...