ಶಿಕಾರಿಪುರ ಜುಲೈ 12.
ಅತಿಯಾದ ವೈಚಾರಿಕತೆಯಿಂದ ಮನುಷ್ಯನಲ್ಲಿ ನಾಸ್ತಿಕ ಪ್ರವೃತ್ತಿ ಬೆಳೆಯುತ್ತಿವೆ. ಪರಸ್ಪರ ವಿಶ್ವಾಸ ನಂಬಿಕೆಗಳು ಇಲ್ಲದಂತಾಗಿದ್ದು ಮಾನವೀಯ ಸಂಬಂಧಗಳು ಸಡಿಲಗೊಳ್ಳುತ್ತಿವೆ. ಇಂಥ ಸಂದರ್ಭದಲ್ಲಿ ಮತ್ತೊಮ್ಮೆ ಈ ನಾಡಿನ ಧರ್ಮ ಪೀಠಗಳು ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಕಾರ್ಯ ಕೈಗೊಳ್ಳುವ ಅವಶ್ಯಕತೆಯಿದೆ
ಎಂದು ಶ್ರೀಮದ್ ರಂಭಾಪುರಿ ಜಗದ್ಗುರು ಡಾ|| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.
ಅವರು ನಗರದ ಸಾಂಸ್ಕøತಿಕ ಭವನದಲ್ಲಿ ಜರುಗಿದ ಧರ್ಮ ಜಾಗೃತಿ ಸಮಾವೇಶದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಬೆಳೆಯ ಸುರಕ್ಷತೆಗೆ ಕಳೆಯನ್ನು ಕೀಳುವಂತೆ ಆತ್ಮೋನ್ನತಿಗಾಗಿ ದುರ್ಗುಣಗಳನ್ನು ನಿವಾರಿಸಿಕೊಳ್ಳುತ್ತಿರಬೇಕು. ಕಾಲ ಕಾಲಕ್ಕೆ ಎಲೆಗಳು ಉದುರಿದರೂ ಮರದ ಬೇರು ಭದ್ರವಾಗಿರುತ್ತವೆ. ಮನುಷ್ಯನ ಅಭಿಪ್ರಾಯಗಳು ಬದಲಾದರೂ ಮೂಲ ತತ್ವ ಸಿದ್ಧಾಂತಗಳು ಸ್ಥಿರವಾಗಿರುತ್ತವೆ. ಹುಟ್ಟು ಸಾವು ನಿನ್ನ ಕೈಯಲ್ಲಿ ಇಲ್ಲ. ಆದರೆ ಬದುಕು ಮಾತ್ರ ನಿನ್ನ ಕೈಯಲ್ಲಿಯೇ ಇದೆ. ತಾನು ಎಲ್ಲರಿಗಾಗಿ ಅನ್ನುವುದೇ ನಿಜವಾದ ಧರ್ಮ. ಎಲ್ಲರೂ ತನಗಾಗಿ ಅನ್ನುವುದು ಅಧರ್ಮ. ನದಿ ಎಷ್ಟೇ ದೂರ ಹರಿದು ಹೋದರೂ ತಾನು ಹುಟ್ಟಿದ ಸಂಬಂಧವನ್ನು ಕಳೆದುಕೊಳ್ಳುವುದಿಲ್ಲ. ಅದರಂತೆ ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ತನ್ನ ಮೂಲ ಸಂಬಂಧವನ್ನು ಕಳೆದುಕೊಳ್ಳಬಾರದು. ದೇಶಕ್ಕೊಂದು ಸಂವಿಧಾನ ಇರುವಂತೆ ವೀರಶೈವ ಧರ್ಮಕ್ಕೊಂದು ಸಂಹಿತೆಯಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಅಷ್ಟಾವರಣ, ಪಂಚಾಚಾರ ಮತ್ತು ಷಟ್ಸ್ಥಲಗಳನ್ನು ಕೊಟ್ಟ ಮೊದಲ ಕೀರ್ತಿ ಗುರು ಪರಂಪರೆಗೆ ಸಲ್ಲುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ಬಿ.ವೈ. ರಾಘವೇಂದ್ರ ಮಾತನಾಡಿ ಶ್ರೀ ರಂಭಾಪುರಿ ಜಗದ್ಗುರುಗಳವರ ಎರಡು ದಿನದ ಇಷ್ಟಲಿಂಗ ಮಹಾಪೂಜೆ-ಧರ್ಮ ಸಮಾರಂಭಗಳು ನಗರದ ಜನತೆಗೆ ನೆಮ್ಮದಿ ಶಾಂತಿ ತಂದಿವೆ. ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ನಡೆದಾಗ ಉನ್ನತಿ ಸಾಧ್ಯ ಎಂದರು.
ರಟ್ಟೀಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯರು ಉಪದೇಶಾಮೃತ ನೀಡಿದರು. ಹೊನ್ನಾಳಿ ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿಸೇವೆ ಸಲ್ಲಿಸಿದರು. ತೊಗರ್ಸಿ ಮಳೇಹಿರೇಮಠ, ಮಳಲಿ, ಕಡೇನಂದಿಹಳ್ಳಿ, ತೊಗರ್ಸಿ ಪಂಚವಣ ್ಣಗೆಮಠ, ದಿಂಡದಹಳ್ಳಿ, ಕಾಳೇನಹಳ್ಳಿ, ಶಿರಾಳಕೊಪ್ಪ, ಕಣಸೋಗಿ, ಶಿಕಾರಿಪುರ ಮಠಗಳ ಶ್ರೀಗಳು ಉಪಸ್ಥಿತರಿದ್ದರು.
ಹೆಚ್.ಟಿ. ಬಳಿಗಾರ, ಟಿ.ವಿ.ಈಶ್ವರಯ್ಯ, ಪಂಚಾಕ್ಷರಯ್ಯ, ಕೆ.ಜಿ.ಶಿವಪ್ಪಯ್ಯ, ಬಿ.ಡಿ.ಭೂಕಾಂತ, ಸಕ್ರಿ ವಿಜಯಣ್ಣ, ಶೇಖರಪ್ಪ, ಕೆ.ಬಿ. ಪ್ರಭುಸ್ವಾಮಿ, ಚನ್ನಯ್ಯ, ಪಟ್ಟದಸ್ವಾಮಿ, ಬಿ.ಹೆಚ್. ನಾಗರಾಜ, ಜಿ. ಬಸವನಗೌಡರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಚಂದ್ರಶೇಖರ ಮಠದ ಸ್ವಾಗತಿಸಿದರು. ಅಂಗಡಿ ಜಗದೀಶ್ ನಿರೂಪಿಸಿದರು. ಭಾಗ್ಯಶ್ರೀ ರತ್ನಾಕರ ಸುಪ್ರಿಯಾ ಮಠದ ಸಂಗೀತ ಸೇವೆ ಸಲ್ಲಿಸಿದರು.
Read These Next
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು : ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ...
ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಡಿಕೆಶಿ ಘೋಷಣೆ
ಕುಮಟಾ: ಸಚಿವ ಮಂಕಾಳ ವೈದ್ಯರು, ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ...
ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ; ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...
ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ
ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...
ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ
ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...
ಶಿರಸಿ ಕಾಂಗ್ರೇಸ್ ಮುಖಂಡರ ಮನೆ ಮೇಲೆ ಐಟಿ ದಾಳಿ
ಶಿರಸಿ: ೨೦೨೪ ರ ಲೋಕಸಭಾ ಚುನಾಚಣೆ ಇನ್ನೇನು ಕೆಲ ದಿನಗಳು ಬಾಕಿ ಇದ್ದಾಗಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕಾಂಗ್ರೆಸ್ ಮುಖಂಡ ...
ಪದವಿಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯುವ ಹಿನ್ನೆಲೆಯಲ್ಲಿ ಸಮಾಜ ...
ಪ್ರಜಾಸತ್ತೆಯ ಬಂಧನ!
ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...
ಚಿಂದಿ ಆಯುವ ಹಕ್ಕು
ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು.
’ದಲಿತ’ ಪದವನ್ನು ’ಪರಿಶಿಷ್ಟ ಜಾತಿ’ ಎಂಬ ಅರ್ಥಕ್ಕೆ ಸೀಮಿತಗೊಳಿಸಬಾರದು
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಇನ್ನು ಮುಂದೆ ಮಾಧ್ಯಮಗಳು ದಲಿತ ಎಂಬ ಪದವನ್ನು ಬಳಸಬಾರದೆಂದು ಇತ್ತೀಚೆಗೆ ಸಲಹಾತ್ಮಕ ...
ನಿಜಕ್ಕೂ ಸಾದಿಯಾ ಯಾರು?
ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...