ಬೆಂಗಳೂರು:ಸದನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಶರ್ಟ್ ಬಿಚ್ಚಿದ್ದನ್ನು ಕಂಡ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ರೀತಿ ನಡೆದುಕೊಂಡರೆ ಸದನದಿಂದ ಹೊರ ಕಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಪ್ರಸಂಗ ನಡೆಯಿತು.
ವಿಧಾನಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಭಾಷಣ ಮುಗಿಸಿ ಸದಸ್ಯರೆಲ್ಲರೂ ತಮ್ಮ ತಮ್ಮ ಆಸನಗಳಿಗೆ ಹಿಂತಿರುಗಬೇಕೆಂದು ಮನವಿ ಮಾಡಿದರು. ಆಗ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ ಅವರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು.
ತಮ್ಮ ಶರ್ಟ್ ಕಳಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಇದನ್ನು ಕಂಡು ಕೆರಳಿದ ಸ್ಪೀಕರ್ ಅವರು,50 ವರ್ಷ ಆಡಳಿತ ನಡೆಸಿದ ರಾಷ್ಟ್ರೀಯ ಪಕ್ಷದ ಸದಸ್ಯರು ನಡೆದುಕೊಳ್ಳುವ ರೀತಿ ಇದೇನಾ ? ನಿಮ್ಮ ಅಭಿಪ್ರಾಯಗಳು ಏನೇ ಇರಲಿ ಮೊದಲು ನಿಮ್ಮ ನಿಮ್ಮ ಸ್ಥಾನಗಳಿಗೆ ಮರಳಿ. ಈ ವಿಷಯ ಕುರಿತಾಗಿ ನಾನು ಸದನದಲ್ಲೇ ಮಾಹಿತಿ ನೀಡಿದ್ದೇನೆ.
ಈ ವಿಷಯದ ಮೇಲೆ ಇಂತಿಂತವರೇ ಚರ್ಚೆ ಮಾಡುತ್ತೇವೆ ಎಂದು ಹೆಸರುಗಳನ್ನೂ ಕೊಟ್ಟಿದ್ದೀರಿ ಇಂದು ಬೆಳಗ್ಗೆಯಿಂದ ನಿಮ್ಮ ನಿಲುವು ಬದಲಾದರೆ ನಾನೇನು ಮಾಡಲಿ ಎಂದು ಪ್ರಶ್ನಿಸಿದರು.
ಈ ಹಂತದಲ್ಲೂ ಶಾಸಕ ಸಂಗಮೇಶ್ ಅವರು ತಮ್ಮ ಶರ್ಟ್ ಕಳಚಿ ತೋಳನ್ನು ಮೇಲೆತ್ತಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಇದರಿಂದ ಮತ್ತಷ್ಟು ಕೆರಳಿದ ಕಾಗೇರಿ ಅವರು, ಒಬ್ಬ ಹಿರಿಯ ಸದಸ್ಯರಾಗಿ ನಡೆದುಕೊಳ್ಳುವುದು ಹೀಗೆನಾ? ನಿಮ್ಮ ನಡವಳಿಕೆಯನ್ನು ತಿದ್ದಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸದನದಿಂದ ಹೊರ ಹಾಕಬೇಕಾಗುತ್ತದೆ ಎಂದು ಗಂಭೀರ ಎಚ್ಚರಿಕೆ ನೀಡಿದರು.
ಆಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರು ಬಂದು ಸಂಗಮೇಶ್ ಅವರಿಗೆ ಶರ್ಟ್ ಹಾಕಿಸಿದರು. ಸದಸ್ಯರ ಗದ್ದಲ ಮುಂದುವರಿದಿದ್ದರಿಂದ ಕಲಾಪವನ್ನು ಸಭಾಧ್ಯಕ್ಷರು 15 ನಿಮಿಷಗಳ ಕಾಲ ಮುಂದೂಡಿದರು.
Read These Next
ರೆಮ್ಡಿಸಿವರ್ ಬಳಕೆ ದುರುಪಯೋಗ ಪಡಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು : ಹೊಸಕೋಟೆ ಪಟ್ಟಣದ ಎಂ.ವಿ.ಜೆ. ಆಸ್ಪತ್ರೆಗೆ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಭೇಟಿ ...
ಕನಿಷ್ಟ ದರದಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಚನೆ
ಗದಗ : ವಾ.ಕ.ರಾ.ರ.ಸಾ.ಸಂಸ್ಥೆಯ ನಿರ್ವಾಹಕರು ಹಾಗೂ ಚಾಲಕರು ಮತ್ತು ಸಿಬ್ಬಂದಿಗಳು ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದ ...
ಕೋವಿಡ್ ಸೋಂಕಿತರೊಂದಿಗೆ ಜೂಮ್ ವಿಡಿಯೋ ಮೂಲಕ ನೇರವಾಗಿ ಆರೋಗ್ಯ ವಿಚಾರಣೆ
ಮಂಡ್ಯ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ವ್ಯಕ್ತಿಗಳೊಂದಿಗೆ ಜೂಮ್ ವಿಡಿಯೋ ಮೂಲಕ ನೇರವಾಗಿ ಕೋವಿಡ್ ಸೋಂಕಿತರೊಂದಿಗೆ ...
ಕೋವಿಡ್ 2ನೇ ಅಲೆ ಸಮರ್ಥವಾಗಿ ಎದುರಿಸಲು ಸಾಂಘಿಕ ಹೋರಾಟ ಅಗತ್ಯ: ವಿವಿಧ ಸಮಿತಿಗಳ ಸಭೆಯಲ್ಲಿ ಡಿ.ಸಿ. ವಿ.ವಿ.ಜ್ಯೋತ್ಸ್ನಾ ಕರೆ
ಕಲಬುರಗಿ : ತೀವ್ರಗತಿಯಲ್ಲಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆ ಸೋಂಕು ನಿಯಂತ್ರಣಕ್ಕೆ ಸಾಂಘಿಕ ಹೋರಾಟದ ಅಗತ್ಯವಿದ್ದು, ಎಲ್ಲಾ ...
ಕೋವಿಡ್ 2ನೇ ಅಲೆ:ನಿರ್ಲಕ್ಷ್ಯವಹಿಸದೇ ಬಿಗಿಯಾದ ಕ್ರಮಗಳು ಕೈಗೊಳ್ಳಲು ಸಚಿವ ಸಿಂಗ್ ಖಡಕ್ ಸೂಚನೆ
ಬಳ್ಳಾರಿ : ಕೋವಿಡ್ 2ನೇ ಅಲೆಯ ಸೊಂಕು ಅತ್ಯಂತ ತೀವ್ರಗತಿಯಲ್ಲಿ ಹರಡುತ್ತಿದ್ದು, ಸೊಂಕಿಗೆ ಒಳಗಾಗಿ ಹೋಂ ಐಸೋಲೇಶನ್ ನಲ್ಲಿದ್ದುಕೊಂಡು ...
ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ. ಧಾರ್ಮಿಕ ಕಟ್ಟಡ, ಧಾರ್ಮಿಕ ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ: ಆಯುಕ್ತೆ ಪ್ರೀತಿ ಗೆಹ್ಲೋಟ್
ಬಳ್ಳಾರಿ : ಧಾರ್ಮಿಕ ಕಟ್ಟಡಗಳನ್ನು ಮತ್ತು ಧಾರ್ಮಿಕ ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ ಎಂದು ಮಹಾನಗರ ...
ಮಂಗಳ ಗ್ರಹದ ಆಚ್ಚಾದನೆ ವೀಕ್ಷಣೆ
ಮಂಗಳೂರು : ಖಗೋಳದ ಅಪರೂಪ ವಿದ್ಯಮಾನವಾದ ಚಂದ್ರನಿಂದ ಮಂಗಳ ಗ್ರಹದ ಆಚ್ಚಾದನೆಯನ್ನು ಎಪ್ರಿಲ್ 17 ರಂದು ಸಂಜೆ ಪಿಲಿಕುಳ ಪ್ರಾದೇಶಿಕ ...
ಕನಿಷ್ಟ ದರದಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಚನೆ
ಗದಗ : ವಾ.ಕ.ರಾ.ರ.ಸಾ.ಸಂಸ್ಥೆಯ ನಿರ್ವಾಹಕರು ಹಾಗೂ ಚಾಲಕರು ಮತ್ತು ಸಿಬ್ಬಂದಿಗಳು ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದ ...
ಕೋವಿಡ್ ಸೋಂಕಿತರೊಂದಿಗೆ ಜೂಮ್ ವಿಡಿಯೋ ಮೂಲಕ ನೇರವಾಗಿ ಆರೋಗ್ಯ ವಿಚಾರಣೆ
ಮಂಡ್ಯ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ವ್ಯಕ್ತಿಗಳೊಂದಿಗೆ ಜೂಮ್ ವಿಡಿಯೋ ಮೂಲಕ ನೇರವಾಗಿ ಕೋವಿಡ್ ಸೋಂಕಿತರೊಂದಿಗೆ ...
ಕೋವಿಡ್ 2ನೇ ಅಲೆ ಸಮರ್ಥವಾಗಿ ಎದುರಿಸಲು ಸಾಂಘಿಕ ಹೋರಾಟ ಅಗತ್ಯ: ವಿವಿಧ ಸಮಿತಿಗಳ ಸಭೆಯಲ್ಲಿ ಡಿ.ಸಿ. ವಿ.ವಿ.ಜ್ಯೋತ್ಸ್ನಾ ಕರೆ
ಕಲಬುರಗಿ : ತೀವ್ರಗತಿಯಲ್ಲಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆ ಸೋಂಕು ನಿಯಂತ್ರಣಕ್ಕೆ ಸಾಂಘಿಕ ಹೋರಾಟದ ಅಗತ್ಯವಿದ್ದು, ಎಲ್ಲಾ ...
ಕೋವಿಡ್ 2ನೇ ಅಲೆ:ನಿರ್ಲಕ್ಷ್ಯವಹಿಸದೇ ಬಿಗಿಯಾದ ಕ್ರಮಗಳು ಕೈಗೊಳ್ಳಲು ಸಚಿವ ಸಿಂಗ್ ಖಡಕ್ ಸೂಚನೆ
ಬಳ್ಳಾರಿ : ಕೋವಿಡ್ 2ನೇ ಅಲೆಯ ಸೊಂಕು ಅತ್ಯಂತ ತೀವ್ರಗತಿಯಲ್ಲಿ ಹರಡುತ್ತಿದ್ದು, ಸೊಂಕಿಗೆ ಒಳಗಾಗಿ ಹೋಂ ಐಸೋಲೇಶನ್ ನಲ್ಲಿದ್ದುಕೊಂಡು ...
ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ. ಧಾರ್ಮಿಕ ಕಟ್ಟಡ, ಧಾರ್ಮಿಕ ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ: ಆಯುಕ್ತೆ ಪ್ರೀತಿ ಗೆಹ್ಲೋಟ್
ಬಳ್ಳಾರಿ : ಧಾರ್ಮಿಕ ಕಟ್ಟಡಗಳನ್ನು ಮತ್ತು ಧಾರ್ಮಿಕ ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ ಎಂದು ಮಹಾನಗರ ...