ನೌಕಾಪಡೆ ನಿವೃತ್ತ ಅಧಿಕಾರಿಯನ್ನು ಥಳಿಸಿದ ಶಿವಸೇನೆ ಗೂಂಡಾಗಳು; ಕಣ್ಣಿಗೆ ಗಂಭೀರ ಗಾಯ

Source: Agencies | Published on 12th September 2020, 12:26 AM | National News | Don't Miss |

 


ಮುಂಬೈ:ನೌಕಾಪಡೆಯ ನಿವೃತ್ತ ಹಿರಿಯ ಅಧಿಕಾರಿಯೋರ್ವರಿಗೆ ಶಿವಸೇನೆ ಕಾರ್ಯಕರ್ತರು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಬಿಜೆಪಿ ಎಂಎಲ್​ಎ ಅತುಲ್​ ಭಟ್ಕಲ್ಕರ್ ಆರೋಪಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ಕಾರ್ಟೂನ್​​ನ್ನು ವಾಟ್ಸ್​ಆ್ಯಪ್​​ನಲ್ಲಿ ಫಾರ್​​ವರ್ಡ್​ ಮಾಡುತ್ತಿದ್ದಾರೆ ಎಂದು ಶಿವಸೇನೆ ಎಂಟು ಮಂದಿ ಗೂಂಡಾಗಳು ಸೇರಿ ನಿವೃತ್ತ ನೇವಿ ಅಧಿಕಾರಿ ಮದನ್​ ಶರ್ಮಾ ಅವರನ್ನು ಥಳಿಸಿದ್ದಾರೆ ಎಂದು ಹೇಳಿದ್ದಾರೆ.
ಕಂಡಿವಲಿ ಪೂರ್ವದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವಸೇನೆ ಶಾಖಾ ಪ್ರಮುಖ್​ ಮದನ್​ ಶರ್ಮಾ ಅವರಿಗೆ ಕರೆ ಮಾಡಿ, ಮನೆಯಿಂದ ಈಚೆ ಬರುವಂತೆ ತಿಳಿಸಿದ್ದಾರೆ. ಮದನ್​ ಶರ್ಮಾ ಅವರು ಹೊರಗೆ ಬರುತ್ತಿದ್ದಂತೆ ಅವರನ್ನು ಥಳಿಸಿದ್ದಾರೆ. ಇದರಿಂದ ಶರ್ಮಾ ಅವರ ಕಣ್ಣಿಗೆ ಗಂಭೀರ ಗಾಯವಾಗಿದೆ ಎಂದು ಅತುಲ್​ ಅವರು ತಿಳಿಸಿದ್ದಾರೆ.
ಅಷ್ಟೇ ಅಲ್ಲ, ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥರಿಗೆ ಒಂದು ಎಚ್ಚರಿಕೆ ನೀಡುತ್ತಿದ್ದೇನೆ. ನಿಮ್ಮ ಗೂಂಡಾಗಿರಿಗೆ ಹೆದರಿ ಮಹಾರಾಷ್ಟ್ರದ ಜನರು ಖಂಡಿತ ಸುಮ್ಮನೆ ಕೂರುವುದಿಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ನಿವೃತ್ತ ಅಧಿಕಾರಿಗೆ 66 ವರ್ಷ ವಯಸ್ಸಾಗಿದ್ದು, ಅವರ ಪುತ್ರಿಯೂ ಕೂಡ, ತನ್ನ ತಂದೆಯ ಮೇಲೆ ಹಲ್ಲೆ ನಡೆದಿದ್ದಾಗಿ ಆರೋಪಿಸಿದ್ದಾರೆ.
ತಮ್ಮ ಮೇಲೆ ಸುಮಾರು 12 ಮಂದಿ ಹಲ್ಲೆ ನಡೆಸಿದ್ದಾಗಿ ಮದನ್​ ಶರ್ಮಾ ಹೇಳಿದ್ದಾರೆ. ಅಲ್ಲಿಗೆ ಬಂದ ಪೊಲೀಸರೂ ನನ್ನನ್ನೇ ಬಂಧಿಸಲು ಮುಂದಾದರು. ಆದರೆ ಬಿಜೆಪಿ ಶಾಸಕ ಅತುಲ್​ ಮತ್ತು ರಾಣಿ ದ್ವಿವೇದಿ ಸಹಾಯ ಮಾಡಿದರು ಎಂದು ತಿಳಿಸಿದ್ದಾರೆ. ಶಿವಸೇನೆ ಕಾರ್ಯಕರ್ತರ ವಿರುದ್ಧ ಸಂತ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...