ಮುಂಡಗೋಡ : ಎಲ್ಲ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದು ಧರ್ಮವನ್ನು ಉಳಿಸಿ ಸಂರಕ್ಷಣೆ ಮಾಡಿದ ಛತ್ರಪತಿ ಶಿವಾಜಿ. 17ನೇ ಶತಮಾನದಲ್ಲಿ ಶಿವಾಜಿ ಮಹರಾಜ ಬರದೆ ಇರುತ್ತಿದ್ದರೆ ಹಿಂದು ಧರ್ಮವು ಉಳಿಯುತ್ತಿತ್ತಾ ಎಂಬ ಪ್ರಶ್ನೆ ಭಾರತವು ಸೇರಿದಂತೆ ಜಗತ್ತಿನಾಧ್ಯಂತ ಮೂಡುವಂತಾಗಿದೆ ಎಂದು ಜಿ.ಪಂ ಸದಸ್ಯ ಎಲ್.ಟಿ.ಪಾಟೀಲ ಹೇಳಿದರು
ಅವರು ಮಿನಿವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ, ತಾಲೂಕ ಪಂಚಾಯತ ಹಾಗೂ ಪಟ್ಟಣ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಶಿವಾಜಿ ಜಯಂತಿ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು
ಶಿವಾಜಿ ಮಹರಾಜ ಒಂದೇ ಸಮಾಜಕ್ಕೆ ಸಂಬಂದ ಪಟ್ಟವರಲ್ಲ ಭಾರತದಲ್ಲಿ ಹುಟ್ಟಿ ಬೆಳದ ಸರ್ವರಿಗೂ ಸೇರಿದ ಮಹಾಪುರಷ. ಶಿವಾಜಿ ಜಯಂತಿ ಮಾಡಿದರೆ ಸಾಲದು ಅವರು ಹಾಕಿಕೊಟ್ಟ ಮಾರ್ಗದರ್ಶನಗಳು, ತತ್ವ ಸಿದ್ದಾಂತಗಳು ಜೀವನದಲ್ಲಿ ಅಳವಡಿಸಿಕೊಂಡಾಗ ಸರಕಾರದ ವತಿಯಿಂದ ಜಯಂತಿ ಆಚರಿಸುತ್ತಿವುದು ಸಾರ್ಥಕವಾಗುತ್ತದೆ. ಮುಂಡಗೋಡ ಪಟ್ಟಣದ ಶಿವಾಜಿ ವೃತ್ತದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸುವಂತ ಬಹಳ ದಿನಗಳ ಕನಸು ಸಾರ್ಥಕಮಾಡಲು ಎಲ್ಲರ ಸಹಕಾರ ಅಗತ್ಯವಿದೆ ಎಂದರು
ಪಟ್ಟಣಪಂಚಾಯತ್ ಸದಸ್ಯ ಅಶೋಕ ಚಲವಾದಿ ಶಿವಾಜಿ ಮಹರಾಜರ ಕುರಿತು ಮಾತನಾಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರೇಡ್ 2 ತಹಶೀಲ್ದಾರ ಗಣಪತಿ ಭಟ್ಟ ವಹಿಸಿದ್ದರು.
ಬಿಜೆಪಿ ತಾ.ಅಧ್ಯಕ್ಷ ನಾಗಭೂಷಣ ಹಾವಣಗೆ, ಮರಾಠ ಸಮಾಜ ಮುಖಂಡರಾದ ತಾ.ಪಂ ಸದಸ್ಯ ಜ್ಞಾನದೇವ ಗುಡಿಯಾಳ, ಪ.ಪಂ. ಸದಸ್ಯ ಶಿವರಾಜ ಸುಬ್ರಾಯ್, ವ್ಯಾ.ಪಿ.ಪಾಟೀಲ್, ಶ್ರೀಧರ ಡೋರಿ, ಪರಷುರಾಮ ತಹಶೀಲ್ದಾರ, ಪಿ.ಜಿ.ಪಾಟೀಲ, ಎಮ್.ಪಿ.ಕುಸೂರ, ದಲಿತ ಮುಖಂಡ ಚಿದಾನಂದ ಹರಿಜನ ಸೇರಿದಂತೆ ಅಧಿಕಾರಿಗಳಾದ ತಾ.ಪಂ ಇಒ ಪ್ರವೀಣ ಕಟ್ಟಿ, ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗೀಮಠ, ಕೃಷಿ ಇಲಾಖೆ ಎ.ಡಿ ಎಮ್.ಎಸ್ ಕುಲಕರ್ಣಿ ಕಂದಾಯ ಇಲಾಖೆ ಶಿರೇಸ್ತೆದಾರ ವಿಜಯಕುಮಾರ ಶೇಟ್ಟಪ್ಪನವರ ಸೇರಿದಂತೆ ಮುಂತಾದವರು ಇದ್ದರು
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...