ಶಿವಮೊಗ್ಗ ಜೂನ್- 14. ಭಾವೈಕ್ಯತೆ ಮತ್ತು ಅಧ್ಯಾತ್ಮ ಜ್ಞಾನ ಭಾರತದ ಉಸಿರು. ಧರ್ಮ ದೇಶ ಮನುಷ್ಯನ ಎರಡು ಕಣ್ಣು. ಧಾರ್ಮಿಕ ಸತ್ಪರಂಪರೆಯ ಜೊತೆಗೆ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ವೀರಶೈವ ಧರ್ಮದ ಪಂಚ ಪೀಠಗಳ ಕೊಡುಗೆ ಅಪಾರವಾದುದೆಂದು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಐ.ಟಿ.ಐ. ಕೇಂದ್ರದಲ್ಲಿ ಜರುಗಿದ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ವಧು-ವರರ ಸಮಾವೇಶ, ‘ಪಂಚಾಚಾರ್ಯ ದೀಪ್ತಿ’ ಪ್ರಶಸ್ತಿ ಪ್ರದಾನ ಹಾಗೂ ಐಟಿಐ 23ನೇ ವಾರ್ಷಿಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ವೀರಶೈವ ಧರ್ಮದ ಇತಿಹಾಸ ಪರಂಪರೆ ಪ್ರಾಚೀನವಾಗಿದ್ದು ಪರಶಿವನ ಸಂಕಲ್ಪಾನುಸಾರ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಭೂ ಮಂಡಲದಲ್ಲಿ ಸಂಸ್ಥಾಪಿಸಿದರು. 28 ಶಿವಾಗಮಗಳಲ್ಲಿ ವೀರಶೈವ ಧರ್ಮದ ಆದರ್ಶ ಮೌಲ್ಯಗಳನ್ನು ಕಾಣಬಹುದಾಗಿದೆ. ಮಹಾಮುನಿ ಅಗಸ್ತ್ಯರಿಗೆ ಬೋಧಿಸಿದ ಸಿದ್ದಾಂತ ಶಿಖಾಮಣ ಧರ್ಮ ಗ್ರಂಥದಲ್ಲಿ ಜೀವ ಶಿವನಾಗುವ ನರ ಹರನಾಗುವ ಭವಿ ಭಕ್ತನಾಗುವ ಸಾಧನೆಯ ಹಂತಗಳನ್ನು ಅರ್ಥಪೂರ್ಣವಾಗಿ ನಿರೂಪಿಸಿದ್ದಾರೆ. ಸಮರ ಜೀವನದಿಂದ ಅಮರ ಜೀವನಕ್ಕೆ ಕೊಂಡೊಯ್ಯುವ, ಅಂತರಂಗ-ಬಹಿರಂಗ ಶುದ್ಧಿಗೆ ಸಂಸ್ಕಾರ ಮತ್ತು ಸತ್ಯ ಸಂಸ್ಕøತಿ ಎತ್ತಿ ಹಿಡಿದ ಕೀರ್ತಿ ಆಚಾರ್ಯ ಪರಂಪರೆಗೆ ಸಲ್ಲುತ್ತದೆ. ಜಾತಿ ಜನಾಂಗಗಳ ಗಡಿ ಮೀರಿ ಭಾವೈಕ್ಯತೆ ಸಾಮರಸ್ಯ, ರಾಷ್ಟ್ರಭಕ್ತಿ, ಕ್ರಿಯಾಶೀಲ ಬದುಕು ರೂಢಿಸುವಲ್ಲಿ ಪಂಚಪೀಠಗಳು ಕೊಟ್ಟ ಕೊಡುಗೆ ಅಪಾರವಾದುದು. ಸಮಾಜದ ಜನತೆ ಜಡತ್ವದಿಂದ ಹೊರಬರಬೇಕಾಗಿದೆ. ಸತ್ಯವಾದ ಮೂಲ ಸಿದ್ಧಾಂತಗಳನ್ನು ತಿಳಿಯಲು ಸಮಾಜ ಹಿಂದೇಟು ಹಾಕುತ್ತಿರುವುದು ದುರ್ದೈವದ ಸಂಗತಿ ಎಂದರು. ಪ್ರತಿ ವರುಷ ವಿಘ್ನೇಶ್ವರಯ್ಯ ಸೋಲಾಪುರ ತಮ್ಮ ಐಟಿಐ ಕೇಂದ್ರದಲ್ಲಿ ಶ್ರೀ ಜಗದ್ಗುರು ಪಂಚಚಾರ್ಯ ಯುಗಮಾನೋತ್ಸವ ಆಚರಿಸಿಕೊಂಡು ಬರುತ್ತಿರುವುದು ತಮಗೆ ಸಂತಸ ತಂದಿದೆ ಎಂದು ಸಂತೃಪ್ತಿ ವ್ಯಕ್ತಪಡಿಸಿದರು.
ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎನ್.ಜೆ. ರಾಜಶೇಖರ (ಸುಭಾಷ್) ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕೆನರಾ ಬ್ಯಾಂಕ ಶೇಷಾದ್ರಿಪುರಂ ಬ್ರ್ಯಾಂಚಿನ ಮ್ಯಾನೇಜರ್ ವಿಜಯಕುಮಾರ್, ಇಂ.ನ್ಯಾ. ವೀರಶೈವ ಫೌಂಡೇಶನ್ ಅಧ್ಯಕ್ಷ ಬಿ.ಜಿ. ಮಲ್ಲಿಕಾರ್ಜುನ, ಸಂಸ್ಥಾಪಕ ಅಧ್ಯಕ್ಷ ಮಳಲಕೆರೆ ಗುರುಮೂರ್ತಿ ಭಾಗವಹಿಸಿದ್ದರು.
ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ನುಡಿ ನಮನ ಸಲ್ಲಿಸಿ ಐಟಿಐ ಮಾಡಿಕೊಂಡ ಯಾವುದೇ ವಿದ್ಯಾರ್ಥಿ ನಿರುದ್ಯೋಗಿಯಾಗಿರಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ತಮ್ಮಲ್ಲಿರುವ ಸಂಕುಚಿತ ಭಾವನೆಗಳನ್ನು ದೂರಮಾಡಿಕೊಳ್ಳಬೇಕೆಂದರು. ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು ಮಾತನಾಡಿ ಬೆಳೆದು ಬಂದಿರುವ ಪ್ರಾಚೀನ ಪರಂಪರೆಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಶ್ರೀ ಜ|| ಪಂಚಾಚಾರ್ಯ ಐಟಿಐ ಮಾಡುತ್ತಿದೆ. ತಂತ್ರಜ್ಞಾನದ ಜೊತೆ ಜೊತೆಗೆ ತತ್ವಜ್ಞಾನವೂ ಇಲ್ಲಿ ಬೆಳೆಯುತ್ತಿದೆ ಎಂದರು.
ಪ್ರಶಸ್ತಿ:- ಇಂಟರ್ ನ್ಯಾಶನಲ್ ವೀರಶೈವ ಫೌಂಡೇಶನ್(ರಿ) ಕೊಡಮಾಡುವ 2017ನೇ ಸಾಲಿನ “ಪಂಚಾಚಾರ್ಯ ದೀಪ್ತಿ” ಪ್ರಶಸ್ತಿಯನ್ನು ಹೊನ್ನಾಳಿ ತಾಲೂಕ ಕೋಟೆಮಲ್ಲೂರಿನ ಶಿವಲಿಂಗಾರಾಧ್ಯ ಶಾಸ್ತ್ರಿಗಳು, ಶಿವಮೊಗ್ಗದ ಹೃದಯ ತಜ್ಞ ಡಾ|| ನರೇಂದ್ರ ಜಿ.ನಿಶಾನಿಮಠ, ಸೊರಬ ತಾಲೂಕ ಚಿಗಟೂರಿನ ಪ್ರಗತಿಪರ ರೈತ ಎಸ್.ರಾಜಶೇಖರ, ಶಿಕಾರಿಪುರ ಶ್ರೀ ಜ||ರೇಣುಕಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಅಂಗಡಿ ಜಗದೀಶ ಮತ್ತು ಶಿವಮೊಗ್ಗದ ಪ್ರೈವೇಟ್ ಎಂಪ್ಲಾಯಮೆಂಟ್ ಬ್ಯೂರೋದ ಡಾ|| ಸುರೇಶ್ ಬಾಳೆಗುಂಡಿ ಇವರಿಗೆ ಪ್ರದಾನ ಶ್ರೀ ರಂಭಾಪುರಿ ಜಗದ್ಗುರುಗಳು ಪ್ರದಾನ ಮಾಡಿದರು. ಬಿ.ಎಸ್ಸಿ.ಯಲ್ಲಿ ಚಿನ್ನದಪದಕ ಪಡೆದ ಕುಮಾರಿ ಸೌಮ್ಯ ಸಿ.ಎಂ. ಇವರಿಗೆ ಪ್ರತಿಭಾ ದೀಪ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಐಟಿಐ ಪ್ರಾಂಶುಪಾಲ ವಿಘ್ನೇಶ್ವರ ಸೋಲಾಪುರ ಇವರು ಪ್ರಾಸ್ತಾವಿಕ ಮಾತನಾಡಿ ಐಟಿಐ ನಡೆದು ಬಂದ ದಾರಿಯನ್ನು ವಿವರಿಸಿ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಸಂಜೆ ಕಾಲೇಜ್ ಆರಂಭಿಸಲಾಗಿದೆ ಎಂದರು.
ಬಾಳೆಹೊನ್ನೂರು ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ, ಹರಿಹರದ ಶಿವಯೋಗಿ ಕಂಬಾಳಿಮಠರಿಂದ ನಿರೂಪಣೆ, ರಾಜ್ಯ ಪ್ರಶಸ್ತಿ ಪುರಸ್ಕøತ ಉಸ್ತಾದ್ ಹುಮಾಯೂನ್ ಹರ್ಲಾಪುರ ಹಾಗೂ ನಿಷಾದ್ ಹರ್ಲಾಪುರ ಇವರಿಂದ ಸಂಗೀತ ಜರುಗಿತು. ಗಂಜೀಗಟ್ಟಿ ಕೃಷ್ಣಮೂರ್ತಿ ಲಾವಣ ಆಧಾರಿತ ಧರ್ಮಗೀತೆ ಹಾಡಿದರು.
Read These Next
ಬಿಸಿಲಿನ ತಾಪಮಾನ ಏರಿಕೆಯ ನಡುವೆಯೂ ಹಕ್ಕು ಚಲಾಯಿಸಿದ ಮೆತದಾರರು
ತಾಪಮಾನ ಏರಿಕೆಯ ನಡುವೆಯೂ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ...
ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಪದವಿಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯುವ ಹಿನ್ನೆಲೆಯಲ್ಲಿ ಸಮಾಜ ...
ಪ್ರಜಾಸತ್ತೆಯ ಬಂಧನ!
ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...
ಚಿಂದಿ ಆಯುವ ಹಕ್ಕು
ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು.
’ದಲಿತ’ ಪದವನ್ನು ’ಪರಿಶಿಷ್ಟ ಜಾತಿ’ ಎಂಬ ಅರ್ಥಕ್ಕೆ ಸೀಮಿತಗೊಳಿಸಬಾರದು
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಇನ್ನು ಮುಂದೆ ಮಾಧ್ಯಮಗಳು ದಲಿತ ಎಂಬ ಪದವನ್ನು ಬಳಸಬಾರದೆಂದು ಇತ್ತೀಚೆಗೆ ಸಲಹಾತ್ಮಕ ...
ನಿಜಕ್ಕೂ ಸಾದಿಯಾ ಯಾರು?
ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...