ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಸಚಿವ ಶಿವರಾಮ ಹೆಬ್ಬಾರ ಹಾಗೂ ಉಪಾಧ್ಯಕ್ಷರಾಗಿ ಮೋಹನದಾಸ ನಾಯಕ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 16 ನಿರ್ದೇಶಕ ಸ್ಥಾನದ ಬ್ಯಾಂಕಿಗೆ ಹಲವಾರು ಸಹಕಾರಿ ಸಂಘಗಳ ಪ್ರತಿನಿಧಿಗಳು ನಿರ್ದೇಶಕರಾಗಲು ಯತ್ನಿಸಿದ್ದರು. ಆದರೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಮ ಹೆಬ್ಬಾರ, ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕಿನ ಹಳೆಯ ಪರಂಪರೆಯಂತೆ ಪಕ್ಷದ ವಿಚಾರ ತರದೇ ಪಕ್ಷಾತೀತ ತಳಹದಿಯಲ್ಲಿ ನಡೆಯುತ್ತಿದೆ. ಬ್ಯಾಂಕಿನ ಬೆಳವಣಿಗೆಗೆ ಪ್ರತಿ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮುಂದುವರೆಸಿಕೊಂಡು ಹೋಗುತ್ತೇವೆ. ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಿವರಾಮ ಹೆಬ್ಬಾರ ಹೇಳಿದರು.
ಈ ಹಿಂದೆ ಕಾಂಗ್ರೆಸ್ ಬೆಂಬಲಿತರೇ ಹೆಚ್ಚಾಗಿ ಅಧ್ಯಕ್ಷರಾಗುತ್ತಿದ್ದರು. ಇದೀಗ ಬಿಜೆಪಿಯಲ್ಲಿರುವ ಸಚಿವ ಶಿವರಾಮ ಹೆಬ್ಬಾರ ಆಯ್ಕೆಯಾಗಿದ್ದಾರೆ.