ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯದ 2022-23 ನೇ ಸಾಲಿನ ಬಿ.ಎಡ್ ನಾಲ್ಕನೇ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಇತ್ತೀಚಿಗೆ ಪ್ರಕಟಗೊಂಡಿದ್ದು , ಪಟ್ಟಣದ ಭಟ್ಕಳ ಎಜುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಬಿ.ಎಡ್ ಕಾಲೇಜು ಶೇ. 100 ಫಲಿತಾಂಶ ಸಾಧಿಸಿದೆ.
ಪರೀಕ್ಷೆ ಬರೆದ 41 ವಿದ್ಯಾರ್ಥಿಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಿರ್ಣಗೊಂಡಿದ್ದು, ಪ್ರತಿಭಾ ಜಾಧವ್ ಶೇ.95.50 ಅಂಕದೊಂದಿಗೆ ಪ್ರಥಮ ಸ್ಥಾನ , ಶುಭಶ್ರೀ.ಎಚ್ ಶೇ.93.83 ಅಂಕದೊಂದಿಗೆ ದ್ವಿತೀಯ ಹಾಗೂ ದಾಕ್ಷಾಯಿಣಿ ಕಲ್ಬಾಗ್ ಮತ್ತು ಮಂಜುಳಾ ಇವರು ಶೇ 93.67 ಅಂಕದೊಂದಿಗೆ ತೃತೀಯ ಸ್ಥಾನವನ್ನು ಹಂಚಿಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುರೇಶ ನಾಯಕ್, ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅರ್.ಜಿ.ಕೊಲ್ಲೆ, ಟ್ರಸ್ಟಿ ಮೆನೇಜರ್ ಶ್ರೀ ರಾಜೇಶ ನಾಯಕ್ ಹಾಗೂ ಪ್ರಾಂಶುಪಾಲರಾದ ಡಾ. ವಿರೇಂದ್ರ ವಿ ಶ್ಯಾನಭಾಗ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.