ಶ್ರೀ ಗುರು ಸುಧೀಂದ್ರ ಬಿಬಿಎ ಹಾಗೂ ಬಿಸಿಎ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

Source: sonews | By Staff Correspondent | Published on 22nd March 2019, 6:28 PM | Coastal News |

ಭಟ್ಕಳ: ಶ್ರೀ ಗುರು ಸುಧೀಂದ್ರ ಬಿಬಿಎ ಹಾಗೂ ಬಿಸಿಎ ಕಾಲೇಜಿನಲ್ಲಿ ವಾರ್ಷಿಕೋತ್ಸವ ಹಾಗೂ 2018-19ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು. 

ಮುಖ್ಯಅತಿಥಿಗಳಾಗಿ ಆಗಮಿಸಿದ ಶಿರಸಿಯ ಉದ್ಯಮಿ, ಸಮಾಜ ಸೇವಕ ರಾಮು ಹರಿ ಕಿಣಿ ಕಾರ್ಯಕ್ರಮ ಉದ್ಘಾಟಿಸಿ  ಮಾತನ್ನಾಡಿ "ಶಿಕ್ಷಿತರು ಉದ್ಯಮಿಗಳಾಗಿ, ಸಮಾಜಕ್ಕೆ ನೆರವಾಗಬೇಕು" 

ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಜೀವ ನಾಯ್ಕ " ಮೌಲ್ಯಯುತ ಶಿಕ್ಷಣ ವಿದ್ಯಾರ್ಥಿಗಳಿಗೆ ಅವಶ್ಯಕ " ಎಂದು ಹೇಳಿದರು. 

ಈ ಸಂಧರ್ಭದಲ್ಲಿ ಟ್ರಸ್ಟ್‍ನ ಅಧ್ಯಕ್ಷರಾದ ಡಾ|| ಸುರೇಶ ನಾಯಕ, ಟ್ರಸ್ಟಿ ಮ್ಯಾನೆಜರ್ ರಾಜೇಶ ನಾಯಕ,  ಆಡಳಿತಾಧಿಕಾರಿ ಹಾಗೂ ಬಿಬಿಎ ಕಾಲೇಜಿನ ಪ್ರಾಂಶುಪಾಲ ನಾಗೇಶ ಭಟ್, ಬಿಸಿಎ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ ಪೈ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. 

ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಸಾಧನೆಗೈದ ವಿದ್ಯಾಥಿಗಳನ್ನು ಪುರಸ್ಕರಿಸಲಾಯಿತು. 

Read These Next