ಎಸ್.ಐ.ಓ ಕರ್ನಾಟಕ ನಿಯೋಗದಿಂದ ಸಿದ್ಧರಾಮಯ್ಯ ಭೇಟಿ - ಅಧಿವೇಶನದಲ್ಲಿ ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಚರ್ಚಿಸಲು ಆಗ್ರಹ

Source: S O News Service | By I.G. Bhatkali | Published on 9th September 2020, 5:55 PM | Coastal News | State News |

ಬೆಂಗಳೂರು: ಕೇಂದ್ರ ಸರಕಾರ ಅನುಷ್ಠಾನಕ್ಕೆ ತರಲು ಯತ್ನಿಸುತ್ತಿರುವ ನೂತನ ಶಿಕ್ಷಣ ನೀತಿಯ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಸರಕಾರದ ಮೇಲೆ ಒತ್ತಾಯ ತರಬೇಕೆಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಎಸ್.ಐ.ಓ ಕರ್ನಾಟಕ ನಿಯೋಗ ಭೇಟಿಯಾಗಿ ಆಗ್ರಹಿಸಿತು. 

ಸೆಪ್ಟೆಂಬರ್ 16 ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಚರ್ಚಿಸಬೇಕು ಮತ್ತು ಮುಖ್ಯಮಂತ್ರಿಗಳಿಗೆ ಚರ್ಚೆಗೆ ಸಮಯ ಮೀಸಲು ಇಡಲು ಪತ್ರ ಬರೆಯುವಂತೆ ಸಿಧ್ಧರಾಮಯ್ಯ ಅವರಲ್ಲಿ ಈ ಸಂದರ್ಭದಲ್ಲಿ ವಿನಂತಿಸಲಾಯಿತು. 

ಈ ಸಂದರ್ಭದಲ್ಲಿ ಎಸ್.ಐ.ಓ ಕರ್ನಾಟಕ ನಿಯೋಗದಲ್ಲಿ ರಾಜ್ಯಾಧ್ಯಕ್ಷರಾದ ನಿಹಾಲ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಡಾ. ನಸೀಮ್ ಅಹ್ಮದ್, ಸಂಪರ್ಕ ಕಾರ್ಯದರ್ಶಿ ಯಾಸೀನ್ ಕೋಡಿಬೆಂಗ್ರೆ, ರಾಜ್ಯ ಕಾರ್ಯದರ್ಶಿಗಳಾದ ಅಸೀಮ್ ಜವಾದ್, ಸಯ್ಯದ್ ಶಫಿ, ಸದಸ್ಯರಾದ ಅಫ್ವಾನ್ ಹೂಡೆ ಉಪಸ್ಥಿತರಿದ್ದರು.

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...