ಕಾರವಾರ ಅಕ್ಟೋಬರ 13 : ದನ್ವಂತರಿ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ನಿಸರ್ಗ ಟ್ರಸ್ಟ್ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ 17 ರಂದು ಶಿರಸಿಯ ನಿಸರ್ಗ ಆಸ್ಪತ್ರೆಯಲ್ಲಿ ನೋವು ನಿವಾರಣೆಯಲ್ಲಿ ಆಯುರ್ವೇದ ಚಿಕಿತ್ಸೆ ಎಂಬ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರಿಂದ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಸಂಧಿವಾತ ರೋಗದ ಬಗ್ಗೆ ಮಾಹಿತಿ, ತಪಾಸಣೆ, ಚಿಕಿತ್ಸೆ, ವಸ್ತು ಪ್ರದರ್ಶನ, ಔಷದಿ ಸಸ್ಯಗಳ ಪರಿಚಯ, ಸುಲಭ ಚಿಕಿತ್ಸಾ ವಿಧಾನಗಳ ಪ್ರಾತ್ಯಕ್ಷಿತೆಯೊಂದಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುವದು. ಆಸಕ್ತ ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಿ.ಆರ್. ಬಸವರಾಜಯ್ಯ ಕೋರಿದ್ದಾರೆ.
ಫೆಲೋಶಿಪ್ ಅರ್ಜಿ ಆಹ್ವಾನ
ಕಾರವಾರ ಅಕ್ಟೊಬರ 13: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪ್ರಸ್ತಕ ಸಾಲಿಗೆ ಯಕ್ಷಗಾನ ಕ್ಷೇತ್ರದಲ್ಲಿ 5 ತೀಂಗಳುಗಳ ಕಾಲ ಸಂಶೋಧನಾ ಅಧ್ಯಯನ ಮಾಡಿ ಪ್ರಬಂಧ ಮಂಡಿಸಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸ ಬಯಸುವರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. 45 ವರ್ಷ ವಯೋಮಿತಿಯೊಳಗಿರÀಬೇಕು. ಕನ್ನಡ ಭಾಷಾ ವಿಜ್ಞಾನ, ಜಾನಪದ, ಸಮಾಜ ವಿಜ್ಞಾನ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಮಹಿಳಾ ಅಧ್ಯಯನ, ಇತಿಹಾಸ, ಮಾನವಶಾಸ್ತ್ರ, ಪತ್ರಿಕೋದ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ, ಇಂಗ್ಲೀಷ ಹಿಂದಿ ಇತ್ಯಾದಿ ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ 31 ಕೊನೆಯ ದಿನವಾಗಿದ್ದು ಅಂಚೆ ಅಥವಾ ಇ-ಮೇಲ್ [email protected] ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಆಸಕ್ತರು ಪ್ರಬಂದಕ್ಕೆ ಆಯ್ಕೆ ಮಾಡಿಕೊಳ್ಳುವ ಅದ್ಯಯನ ವಿಷಯದ ಮೇಲೆ ಸಾರಲೇಖ ಹಾಗೂ ತಮ್ಮ ಸಾಧನೆಯ ಕೀರು ಪರಿಚಯ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ, ರಿಜಿಸ್ಟಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, 2ನೇ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು-2 ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.