ಸಿದ್ದಾಪುರ : ಶಿರಸಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಶೀಘ್ರದಲ್ಲಿ ನೂತನ ಜಿಲ್ಲೆ ರಚನೆಯಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಮಾತನಾಡಿ, ಅಭಿವೃದ್ಧಿ ಮತ್ತು ಅನುಕೂಲತೆ ಕಾರಣದಿಂದ ಘಟ್ಟದ ಮೇಲಿನ ತಾಲೂಕುಗಳನ್ನು ಒಳಗೊಂಡ ನೂತನ ಶಿರಸಿ ಜಿಲ್ಲೆ ರಚನೆಯಾಗಬೇಕು. ಇದು ನಮ್ಮ ಹಲವಾರು ವರ್ಷಗಳ ಬೇಡಿಕೆಯಾಗಿತ್ತು. ಕಳೆದ ಕೆಲವು ದಿನಗಳಿಂದ ಹೋರಾಟವನ್ನು ತೀವ್ರಗೊಳಿಸಲಾಗುತ್ತಿದೆ. ಈ ಹಿಂದೆ ಹಲವು ಕಡೆಗಳಲ್ಲಿ ಪಂಜಿನ ಮೆರವಣಿಗೆ ತಮಟೆ ಬಾರಿಸುವ ಮೂಲಕ ಸರ್ಕಾರದ ಗಮನವನ್ನು ಸೆಳೆಯಲಾಗಿತ್ತು. ಪ್ರತಿ ಒಂದು ಸಂದರ್ಭದಲ್ಲಿ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರುವುದು ಕಷ್ಟ ಸಾಧ್ಯವಾಗಿದೆ ಎಂದರು
ಮೆರವಣಿಗೆಯಲ್ಲಿ ಜಿಲ್ಲಾ ಹೋರಾಟ ಸಮಿತಿಯ ಕಾರ್ಯದರ್ಶಿ ಮಂಜುನಾಥ ಮೊಗೇರ, ತಾಲೂಕ ಘಟಕದ ಅಧ್ಯಕ್ಷ ಸಿ.ಎಸ್.ಗೌಡರ್,ಉಪಾಧ್ಯಕ್ಷರಾದ ಜಿ.ಜಿ.ಹೆಗಡೆ ಬಾಳಗೋಡು,.ತಾಲೂಕ ಪ್ರಧಾನ ಕಾರ್ಯದರ್ಶಿ ಪಿ.ಬಿ.ಹೊಸೂರು, ಖಜಾಂಚಿ ವಾಸುದೇವ ಬಿಳಗಿ, ಪಟ್ಟಣ ಪಂಚಾಯತ ಸದಸ್ಯರುಗಳಾದ ಗುರುರಾಜ ಶಾನಭಾಗ, ನಂದನ್ ಬೋರ್ಕರ್, ಪ್ರಮುಖರಾದ ಪ್ರಶಾಂತ ಶೇಟ್, ರಾಘವೇಂದ್ರ ನಾಯ್ಕ,ಅಣ್ಣಪ್ಪ ನಾಯ್ಕ ಶಿರಳಗಿ ಮೊದಲಾದವರು ಉಪಸ್ಥಿತರಿದ್ದರು.