ಯಲ್ಲಾಪುರ : ಯಲ್ಲಾಪುರದ ಜನಪ್ರಿಯ ಶಾಸಕ ಶಿವರಾಮ ಹೆಬ್ಬಾರ್ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳದ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.
ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್. ಗಾಂವ್ಕರ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಿಸಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಮಂಡಳ ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ ಬರಗದ್ದೆ, ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಯಲ್ಲಾಪುರಕರ್, ಪಟ್ಟಣ ಪಂಚಾಯತ ಸದಸ್ಯ ಅಮಿತ್ ಅಂಗಡಿ, ಸೋಮೇಶ್ವರ ನಾಯ್ಕ, ನಾಗರಾಜ ಅಂಕೋಲೆಕರ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಮಾನಿಗಳು ಹಾಜರಿದ್ದರು.