ಸೌದಿ ಅರೇಬಿಯದಲ್ಲಿ ರಸ್ತೆ ಅಪಘಾತ; ರಾಜ್ಯದ 6 ಮಂದಿ ಸಹಿತ 8 ಮೃತ್ಯು

Source: S O News | By I.G. Bhatkali | Published on 23rd February 2023, 2:02 PM | State News | Gulf News | Incidents |

ಕಲಬುರಗಿ:  ಸೌದಿ ಅರೇಬಿಯದಲ್ಲಿ ಸಂಭವಿ ಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ 6 ಸೇರಿ 8 ಮಂದಿ ಮೃತಪ ಟ್ಟಿರುವ ಘಟನೆ ಬುಧವಾರ ಮುಂಜಾನೆ ವರದಿಯಾಗಿದೆ.

ರಾಯಚೂರು ಮೂಲದ ಒಂದೇ ಕುಟುಂಬದ ಶಫೀದ್ ಹುಸೈನ್ ಸುಲ್ಲದ್, ಬಡೇಜಾನ್ ಸುಲ್ಲರ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಹಾಗೂ ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಮೈನುದ್ದೀನ್ ಸಾಹೇಬ್, ಸೇಡಂನ ಬೇಗಮ್ ಮುಹಮ್ಮದ್ ಅಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದವರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಟ್ರಕ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಮೃತ ಮೈನುದ್ದೀನ್ ಅವರ ಕುಟುಂಬ ಸದಸ್ಯರು ಮಕ್ಕಾಕ್ಕೆ ತೆರಳಿ ಅಲ್ಲೇ ಅಂತಿಮ ಸಂಸ್ಕಾರ ನಡೆಸಲಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ಇತರ ಇಬ್ಬರು ಚಾಲಕರು ಮತ್ತು ಇನ್ನೊಬ್ಬರು ಪ್ರವಾಸಿ ಗುಂಪಿನ ಅಡುಗೆ ಉದ್ಯೋಗಿ ಎಂದು ಗುರುತಿಸಲಾಗಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.