ಹಾವು ಕಡಿತದಿಂದ ಅಪಾಯಕ್ಕೊಳಾಗಿದ್ದ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಿ ಪ್ರಾಣಪಾಯದಿಂದ ಪಾರು ಮಾಡಿದ ಭಟ್ಕಳ ವೈದ್ಯರು

Source: SO News | By Laxmi Tanaya | Published on 8th October 2020, 9:28 AM | Coastal News |

ಭಟ್ಕಳ : ತಾಲೂಕಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ನಾಗರಹಾವು ಕಡಿತಕ್ಕೊಳಗಾದ ಇಬ್ಬರು ಮಕ್ಕಳಿಗೆ  ಸೂಕ್ತ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಜಾಗರೂಕತೆಯಿಂದ ಚಿಕಿತ್ಸೆ ನೀಡಿರುವುದು ಜನ ಮೆಚ್ಚುಗೆಗೆ ಪಾತ್ರವಾಗಿದೆ.
ಮಾರುಕೇರಿಯವಲ ಎಂಟು ವರ್ಷದ ಭರತ್ ನಾಯಕ ಎಂಬಾತನಿಗೆ ವಾರದ ಹಿಂದೆ  ವಿಷಪೂರಿತ ಹಾವು ಕಡಿದು ಜೀವನ್ಮರಣದ ಸ್ಥಿತಿಯಲ್ಲಿದ್ದರು.  ಕೆಲವೇ ನಿಮಿಷದಲ್ಲಿ ಕಾಲಿನಲ್ಲಿ ರಕ್ತ ಸೋರುತ್ತಾ ಆಸ್ಪತ್ರೆಗೆ ಬಂದಿದ್ದರು.  ಮಕ್ಕಳ ತಜ್ಞ ಡಾ. ಸುರಕ್ಷಿತ ಶೆಟ್ಟಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದರು. ಕಚ್ಚಿದ್ದ ಹಾವು ಯಾವುದೆಂದು‌ ತಿಳಿಯದೇ ಆರಂಭದಲ್ಲಿ ಟೆಕ್ಷನ್ ಆಗಿತ್ತು. ಕ್ಲಿಷ್ಟಕರ ಸಂದರ್ಭದಲ್ಲಿ ತ್ವರಿತವಾಗಿ ಚಿಕಿತ್ಸೆ ನೀಡಿದ್ದ ಮಕ್ಕಳ ತಜ್ಞ ಸುರಕ್ಷಿತ ಶೆಟ್ಟಿ ಹಾವಿನ ವಿಷ ಬಾಲಕನ ದೇಹಕ್ಕೆ ಏರದಂತೆ ತೀವ್ರ ನಿಗಾ ವಹಿಸಿದ್ದರು.

 ಆದರೆ ರಾತ್ರಿ ಉಸಿರಾಟದಲ್ಲಿ ಏರುಪೇರಾದ್ದರಿಂದ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಿ ಮತ್ತು ನಿಗಾ ವಹಿಸಿ ಆಸ್ಪತ್ರೆಯು ಇನ್ನಿತರ ವೈದ್ಯರ ಸಹಕಾರದಿಂದ ಅಂತೂ ಪ್ರಾಣಾಪಾಯದಿಂದ ಬಚಾವ್ ಮಾಡಿದ್ದಾರೆ. ಭರತನ   ಕಾಲಿಗೆ ಕಳೆದ ಮೂರು ದಿನಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆ ನಡೆಸಿ ಕೀವು ಸಹಿತ ಕಪ್ಪಾದ ಕರ್ಮವನ್ನು ತೆಗೆದಿದ್ದು, ಬಾಲಕ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. 

 ವೆಂಕಟಾಪುರದ ನಾಲ್ಕು ವರ್ಷದ ಬಾಲಕಿ ಶ್ರೇಯಾ  ಎಂಬಾಕೆಯ ಕೈಗೆ ಕೂಡ ನಾಗರಹಾವು ಕಚ್ಚಿದ್ದು, ಪಾಲಕರು ಜೀವಂತ ಹಾವು ಸಮೇತ ಆಸ್ಪತ್ರೆಗೆ ಬಂದಿದ್ದರಿಂದ ವೈದ್ಯರು ಆಕೆಗೆ ಸೂಕ್ತ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಆಕೆ ಚೇತರಿಸಿಕೊಳ್ಳುತ್ತಿದ್ದಾರೆ. ಹಾವು ಕಡಿತಕ್ಕೊಳಗಾದ ಜೀವನ್ಮರಣದ ಸ್ಥಿತಿಯಲ್ಲಿದ್ದ ಇಬ್ಬರೂ ಮಕ್ಕಳನ್ನು ಕೊವಿಡ್‌ನಂತಹ ಸಂದರ್ಭದಲ್ಲೂ ಸವಾಲಾಗಿ ತೆಗೆದುಕೊಂಡು ಸೂಕ್ತ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿರುವ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸುರಕ್ಷಿತ ಶೆಟ್ಟಿ, ಸರ್ಜನ್ ಡಾ. ಅರುಣಕುಮಾರ ಹಾಗೂ ಆಡಳಿತ ವೈದ್ಯಾಧಿಕಾರಿ ಯೂ ಆಗಿರುವ ಅರವಳಿಕೆ ತಜ್ಞ ಡಾ. ಸವಿತಾ ಕಾಮತ್ ಮತ್ತು ಸಿಬ್ಬಂದಿಗಳ ತಂಡದ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ  ವ್ಯಕ್ತವಾಗಿದೆ.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...