ಇಲ್ಲಿವರೆಗೆ ಚುನಾವಣಾ ಆಯೋಗ ವಶಪಡಿಸಿಕೊಂಡ ಹಣದ ಮೊತ್ತ ಕೇಳಿದರೆ ಶಾಕ್​ ಆಗುವುದು ಖಂಡಿತ!

Source: so news | By MV Bhatkal | Published on 12th April 2019, 12:19 AM | National News | Don't Miss |


ನವದೆಹಲಿ: ಒಟ್ಟು ಏಳು ಹಂತಗಳ ಲೋಕಸಭಾ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ಇಂದು ಮುಕ್ತಾಯವಾಗಿದ್ದು, ಆರು ಹಂತದ ಮತದಾನ ಬಾಕಿ ಇದೆ. ಎಲ್ಲೆಡೆ ಚುನಾವಣಾ ಪ್ರಚಾರದ ಭರಾಟೆ ಭರ್ಜರಿಯಾಗಿ ನಡೆಯುತ್ತಿದೆ. ಇದರ ಮಧ್ಯೆ ಮತದಾರರಿಗೆ ಆಮಿಷವೊಡ್ಡಲು ಹೆಂಡ ಹಾಗೂ ಹಣದ ಹೊಳೆಯನ್ನು ಹರಿಸುತ್ತಿದ್ದು, ಇಲ್ಲಿಯವರೆಗೆ ಚುನಾವಣಾ ಆಯೋಗ ವಶಪಡಿಸಿಕೊಂಡಿರುವ ಹಣದ ಮೊತ್ತವನ್ನು ಬಹಿರಂಗಪಡಿಸಿದೆ.
ಗುರುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಆಯೋಗದ ಅಧಿಕಾರಿಗಳು ಗುರುವಾರದವರೆಗೆ ಒಟ್ಟು 1800 ಗಂಟೆಗಳ ಅವಧಿಯಲ್ಲಿ 607 ಕೋಟಿ ರೂ. ನಗದು, 198 ಕೋಟಿ ರೂ. ಮೌಲ್ಯದ ಮದ್ಯ, 1091 ಕೋಟಿ ರೂ. ಮೌಲ್ಯದ ನಾರ್ಕೋಟಿಕ್ಸ್​ ಮತ್ತು ಡ್ರಗ್ಸ್​, 486 ಕೋಟಿ ರೂ. ಮೌಲ್ಯದ ಬೆಲೆಬಾಳುವ ಲೋಹಗಳು ಹಾಗೂ 48 ಕೋಟಿ ರೂ. ಮೌಲ್ಯದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಎಲ್ಲ ಸೇರಿ ಒಟ್ಟು 2626 ಕೋಟಿ ರೂ. ಮೊತ್ತವನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದರು.
ಚುನಾವಣಾ ಆಯೋಗ ಇನ್ನು ಕೂಡ ಜಾಗರೂಕವಾಗಿದ್ದು, ದೇಶದಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಹಾಗೂ ನ್ಯಾಯೋಚಿತ ಮಾದರಿಯಲ್ಲಿ ಸಾಗಬೇಕೆಂಬುದನ್ನು ಈ ಮೂಲಕ ಖಚಿತಪಡಿಸುತ್ತಿದೆ. ಯಾವುದೇ ಪಕ್ಷವಾಗಲಿ ಅಥವಾ ರಾಜಕೀಯ ನಾಯಕನಾಗಲಿ ಅನಗತ್ಯ ಪ್ರಯೋಜನಕ್ಕೆ ಕೈ ಹಾಕಬಾರದೆಂದು ಆಯೋಗ ಎಚ್ಚರಿಕೆ ನೀಡಿದೆ.
ಹಣ, ಮದ್ಯ, ಡ್ರಗ್ಸ್​ ಮತ್ತು ಇತರೆ ವಸ್ತುಗಳನ್ನು ಪದೇ ಪದೇ ಬಳಸಿ ಜನರಿಗೆ ಆಮಿಷವೊಡ್ಡಿ ದೇಶದಲ್ಲಿ ಮತದಾನ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯತ್ನವಾಗಿದೆ. ಚುನಾವಣೆ ಘೋಷಣೆಯಾಗಿ ನೀತಿಸಂಹಿತೆ ಜಾರಿಯಾದಾಗಿನಿಂದ ಈ ಬಗ್ಗೆ ಬಹಳ ಶಿಸ್ತುಬದ್ಧವಾದ ಕಾರ್ಯಾಚರಣೆ ನಡೆಸಿದ ಚುನಾವಣಾ ಆಯೋಗ ಹಣ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಮೂಲಕ ಯಾವುದೇ ಪಕ್ಷವಾಗಲಿ, ಸಂಘವಾಗಲಿ ಹಾಗೂ ರಾಜಕೀಯ ವ್ಯಕ್ತಿಯಾಗಲಿ ಯಾರೊಬ್ಬರನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಚುನಾವಣಾ ಆಯೋಗ ಖಚಿತಪಡಿಸಿದೆ ಎಂದು ತಿಳಿಸಿದೆ. (ಏಜೆನ್ಸೀಸ್​

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...