ಸಮಾಜ ಸೇವಕಿ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

Source: SOnews | By Staff Correspondent | Published on 8th March 2024, 3:24 PM | National News |

ಹೊಸದಿಲ್ಲಿ: ಖ್ಯಾತ ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.  

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಧಾಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಉಪಸ್ಥಿತಿ ದೇಶದ ನಾರಿ ಶಕ್ತಿಯ ಪ್ರಬಲ ದ್ಯೋತಕವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.   ಅಂತರ್ ರಾಷ್ಟ್ರೀಯ ಮಹಿಳಾ ದಿನದಂದು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ವಿಶೇಷವಾಗಿದೆ.  “ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಖುಷಿ ನೀಡಿದೆ. ಸಮಾಜ ಸೇವೆ, ದಾನ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅವರ ಸೇವೆ ಅಪಾರ ಮತ್ತು ಸ್ಫೂರ್ತಿದಾಯಕ” ಎಂದು ಪ್ರಧಾನಿ ಪೋಸ್ಟ್‌ ಮಾಡಿದ್ದಾರೆ. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನೂ ಅವರು ಉಲ್ಲೇಖಿಸಿದ್ದಾರೆ.

Read These Next

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...