ಕೇರಳಕ್ಕೆ ಮುಂಗಾರು ಪ್ರವೇಶ

Source: Vb | By I.G. Bhatkali | Published on 9th June 2023, 3:46 PM | Coastal News | National News |

ಹೊಸದಿಲ್ಲಿ: ನೈಋತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಜೂನ್ 1ರ ಒಳಗೆ ಕೇರಳದಲ್ಲಿ ಹಾಗೂ ಜುಲೈ ಮಧ್ಯ ಭಾಗದ ಒಳಗೆ ದೇಶದಾದ್ಯಂತ ನೈಋತ್ಯ ಮುಂಗಾರು ಪ್ರವೇಶಿಸುತ್ತದೆ. ಆದರೆ, ಈ ಬಾರಿ ಕೇರಳದಲ್ಲಿ ವಾಡಿಕೆಗಿಂತ ಒಂದು ವಾರ ತಡವಾಗಿ ನೈಋತ್ಯ ಮುಂಗಾರು ಪ್ರವೇಶಿಸಿದೆ.

ಮುಂಗಾರು ಕೇರಳದ ಉಳಿದ ಭಾಗಗಳಿಗೆ, ತಮಿಳುನಾಡು, ಕರ್ನಾಟಕ ಹಾಗೂ ಈಶಾನ್ಯ ರಾಜ್ಯಗಳ ಇನ್ನು ಕೆಲವು ಭಾಗಗಳಿಗೆ ಮುಂದುವರಿಯಲು ಈ ಪರಿಸ್ಥಿತಿ ಪೂರಕವಾಗಿದೆ ಎಂದು ಭಾರತದ ಹವಾಮಾನ ಇಲಾಖೆ ಗುರುವಾರ ಹೇಳಿದೆ.

ಅರಬ್ಬಿ ಸಮುದ್ರದಲ್ಲಿ 'ಬಿಪೊರ್‌ಜಾಯ್' ಚಂಡಮಾರುತವು ರೂಪುಗೊಂಡಿರುವುದರಿಂದ ಈ ಬಾರಿ ಕನಿಷ್ಠ ಇನ್ನೂ ಒಂದು ವಾರ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಇದೆ.

ಅರಬಿ ಸಮುದ್ರದ ದಕ್ಷಿಣ ಭಾಗ, ಲಕ್ಷದ್ವೀಪದ ಸಂಪೂರ್ಣ ಪ್ರದೇಶ, ಕೇರಳದ ಬಹುತೇಕ ಭಾಗ, ದಕ್ಷಿಣ ತಮಿಳುನಾಡಿನ ಭಾಗಗಳು, ಕಮೋರಿನ್, ಮನ್ನಾರ್ ಕೊಲ್ಲಿ ಪ್ರದೇಶ, ನೈಋತ್ಯ, ಕೇಂದ್ರ ಹಾಗೂ ಈಶಾನ್ಯ ಬಂಗಾಲ ಕೊಲ್ಲಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...