ಸುಳ್ಳುಸುದ್ದಿ ಹರಡಿ ಸಿಕ್ಕಿಬಿದ್ದ ‘ಪೋಸ್ಟ್ ಕಾರ್ಡ್’

Source: sonews | By Staff Correspondent | Published on 20th March 2018, 5:43 PM | State News | Special Report | Don't Miss |

ಜೈನಮುನಿಯ ಮೇಲೆ ಮುಸ್ಲಿಮರಿಂದ ದಾಳಿ ಎಂದು ಸುಳ್ಳುಸುದ್ದಿ ಹರಡಿ ಸಿಕ್ಕಿಬಿದ್ದ ‘ಪೋಸ್ಟ್ ಕಾರ್ಡ್’

“ತುಂಬಾ ಬೇಸರದ ಸುದ್ದಿ, ನಿನ್ನೆ ಕರ್ನಾಟಕದಲ್ಲಿ ಜೈನ ಮುನಿಯೊಬ್ಬರ ಮೇಲೆ ಮುಸ್ಲಿಮ್ ಯುವಕರು ದಾಳಿ ನಡೆಸಿದ್ದಾರೆ…. ಸಿದ್ದರಾಮಯ್ಯ ಸರಕಾರದ ಕರ್ನಾಟಕದಲ್ಲಿ ಯಾರೊಬ್ಬರೂ ಸುರಕ್ಷಿತರಲ್ಲ” ಇಂತಹ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದ ತಕ್ಷಣ ಹಲವರು ಇದನ್ನು ನಂಬುತ್ತಾರೆ. ಕೆಲವೊಮ್ಮೆ ಇವುಗಳು ಸಮಾಜದ ಸ್ವಾಸ್ಥ್ಯ ಹದಗೆಡಲೂ ಕಾರಣವಾಗುತ್ತದೆ.

ಜೈನ ಮುನಿಯ ಮೇಲೆ ಮುಸ್ಲಿಮರಿಂದ ಹಲ್ಲೆ ಎನ್ನುವ ಸುದ್ದಿಯನ್ನು ಸುಳ್ಳು ಸುದ್ದಿಗಳನ್ನೇ ಹರಡುವಲ್ಲಿ ಕುಖ್ಯಾತಿ ಗಳಿಸಿರುವ ಹಲವರು ಶೇರ್ ಮಾಡಿದ್ದರು. ಫೇಕ್ ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ನ ಸ್ಥಾಪಕ ವಿಕ್ರಮ್ ಹೆಗ್ಡೆ ಹಾಗು ಹಲವು ಬಾರಿ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದ ಗೌರವ್ ಪ್ರಧಾನ್ ಎಂಬವನ ಟ್ವಿಟರ್ ಖಾತೆಗಳಲ್ಲಿ ಜೈನ ಮುನಿಯ ಮೇಲಿನ ಹಲ್ಲೆಯ ಸುದ್ದಿಯನ್ನು ಪೋಸ್ಟ್ ಮಾಡಲಾಗಿತ್ತು. ಈ ಇಬ್ಬರನ್ನೂ ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಫಾಲೋ ಮಾಡುತ್ತಿದ್ದಾರೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು altnews.in ವರದಿ ಮಾಡಿದೆ.

ಈ ಸುದ್ದಿಯನ್ನು ಫೇಸ್ ಬುಕ್ ನಲ್ಲಿ ಮೊದಲು ಶೇರ್ ಮಾಡಿದ್ದು ದೀಪಕ್ ಶೆಟ್ಟಿ ಎಂಬಾತ. ಈತನ ಪೋಸ್ಟ್ 6000 ಬಾರಿ ಶೇರ್ ಆಗಿತ್ತು. ಪೋಸ್ಟ್ ಕಾರ್ಡ್ ನ್ಯೂಸ್ ಪೇಜ್ ಕೂಡ ಇದನ್ನು ಶೇರ್ ಮಾಡಿತ್ತು.  

ಆದರೆ altnews.in ಈ ಸುದ್ದಿಯ ಹಿಂದೆ ಬಿದ್ದಾಗ ಮುಸ್ಲಿಮ್ ಯುವಕರಿಂದ ಜೈನ ಮುನಿಯ ಮೇಲೆ ದಾಳಿ ನಡೆದಿಲ್ಲ ಎನ್ನುವುದು ಸ್ಪಷ್ಟಗೊಂಡಿದೆ. ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಜೈನ ಮುನಿ ಮಾಯಂಕ್ ಸಾಗರ್ ಎಂಬವರ ಭುಜಕ್ಕೆ ಸಣ್ಣ ಮಟ್ಟಿನ ಗಾಯವಾಗಿತ್ತು. ಕರ್ನಾಟಕದ ಕನಕಪುರದಲ್ಲಿ ಈ ಘಟನೆ ನಡೆದಿತ್ತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.

 

‘ಅಹಿಂಸಾ ಕ್ರಾಂತಿ’ ಎನ್ನುವ ಜೈನ ಪಬ್ಲಿಕೇಶನ್ ಒಂದು ಈ ಬಗ್ಗೆ ವರದಿ ಮಾಡಿತ್ತು. ಈ ಬಗ್ಗೆ altnews.in ಪಬ್ಲಿಕೇಶನ್  ನ ಸಂಪಾದಕರನ್ನು ಸಂಪರ್ಕಿಸಿದ್ದು, ಅಪಘಾತದ ಸುದ್ದಿ ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟವಾಗಿರುವ ಬಗ್ಗೆಯೂ, ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಅವರು ಸ್ಪಷ್ಟಪಡಿಸಿದ್ದರು. ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳಲು ಮಯಾಂಕ್ ಸಾಗರ್ ಫೆಬ್ರವರಿ 4ರಂದು ಕರ್ನಾಟಕಕ್ಕೆ ಆಗಮಿಸಿದ್ದರು. ಈ ಸಂದರ್ಭ ಅಪಘಾತ ಸಂಭವಿಸಿತ್ತು. ಈ ಬಗ್ಗೆ ಮಾರ್ಚ್ 13ರಂದೇ ಅಹಿಂಸಾ ಕ್ರಾಂತಿ ವರದಿ ಮಾಡಿತ್ತು.

ಚುನಾವಣೆಗೂ ಮುನ್ನ ಇಂತಹ ಕಟ್ಟುಕಥೆಗಳ ಸುದ್ದಿಗಳು ಹರಡುವುದು ಸಾಮಾನ್ಯ ಸಂಗತಿ. ಸುಳ್ಳನ್ನೇ ಸತ್ಯವೆಂದು ನಂಬಿಸುವ ಹಲವರು ಇಂತಹ ಅವಕಾಶಕ್ಕಾಗಿಯೇ ಕಾಯುತ್ತಾ ಇರುತ್ತಾರೆ. ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಇಂತಹವರ ವಿರುದ್ಧ ಜನರು ಜಾಗೃತರಾಗಬೇಕು.  

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...