ಚಂಡೀಗಢ: ಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್ (91) ಜೂ.19 ನಿಧನರಾಗಿದ್ದಾರೆ.
ಈ ಮಾಹಿತಿಯನ್ನು ಕುಟುಂಬದ ವಕ್ತಾರರು ದೃಢಪಡಿಸಿದ್ದಾರೆ. ಜೂ.14 ರಂದು ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವನ್ನಪ್ಪಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಿಲ್ಖಾ ಸಿಂಗ್ (91) ಗಾಲ್ಫರ್ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೊರೊನಾದಿಂದ ತೀವ್ರವಾಗಿ ಅನಾರೋಗ್ಯ ಎದುರಿಸಿದ್ದ ಮಿಲ್ಖಾ ಸಿಂಗ್ ಚೇತರಿಸಿಕೊಂಡು ಜೂ.16 ರಂದು ಐಸಿಯುನಿಂದ ಹೊರ ಬಂದಿದ್ದರು. ಆದರೆ ಜೂ.18 ರಂದು ರಾತ್ರಿ 11:30 ರ ವೇಳೆಗೆ ಮೃತಪಟ್ಟಿದ್ದಾರೆ.
ಏಕಾ ಏಕಿ ಜ್ವರ ಮತ್ತು ಆಕ್ಸಿಜನ್ ಪ್ರಮಾಣ ಕುಸಿತ ಕಂಡ ಪರಿಣಾಮ ಮಿಲ್ಖಾ ಸಿಂಗ್ ಸಾವನ್ನಪ್ಪಿದ್ದಾರೆ. ಕಳೆದ ತಿಂಗಳು ಕೊರೋನಾ ಸೋಂಕಿಗೆ ಗುರಿಯಾಗಿದ್ದ ಮಿಲ್ಖಾ ಸಿಂಗ್ ಜೂ.16 ರಂದು ಕೊರೋನಾ ಸೋಂಕು ಪತ್ತೆ ಪರೀಕ್ಷೆ ನೆಗೆಟೀವ್ ಬಂದಿತ್ತು. ಗುರುವಾರದಂದು ಸಂಜೆ ಮಿಲ್ಖಾ ಸಿಂಗ್ ಅವರ ಆರೋಗ್ಯ ಸ್ಥಿರವಾಗಿತ್ತು.
ಮಿಲ್ಖಾ ಸಿಂಗ್ ನಾಲ್ಕು ಬಾರಿ ಏಷ್ಯನ್ಸ್ ಗೇಮ್ಸ್ ನಲ್ಲಿ ಚಿನ್ನದ ಪದಕದ ವಿಜೇತರಾಗಿದ್ದು, 1958 ರ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. 1960 ರ ರೋಮ್ ಒಲಂಪಿಕ್ಸ್ ನಲ್ಲಿ 400 ಮೀಟರ್ ಫೈನಲ್ ನಲ್ಲಿ ನಾಲ್ಕನೇ ಸ್ಥಾನ ಗೆದ್ದಿದ್ದು ಮಿಲ್ಖಾ ಅವರ ಅತ್ಯುತ್ತಮ ಸಾಧನೆಯಾಗಿದೆ. 1956 ಹಾಗೂ 1964 ರ ಒಲಂಪಿಕ್ಸ್ ನಲ್ಲಿ ಮಿಲ್ಖಾ ಸಿಂಗ್ ಭಾರತವನ್ನು ಪ್ರತಿನಿಧಿಸಿದ್ದರು.
ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ
ಖ್ಯಾತ ಓಟಗಾರ ಮಿಲ್ಖಾ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಿಲ್ಖಾ ಸಿಂಗ್ ಅವರನ್ನು ಅಸಾಧಾರಣ ಕ್ರೀಡಾಪಟು ಎಂದು ಮೋದಿ ಹೇಳಿದ್ದಾರೆ.
ಸರಣಿ ಟ್ವೀಟ್ ಮಾಡಿದ ಮೋದಿ, "ಮಿಲ್ಖಾ ಸಿಂಗ್ ಒಬ್ಬ ಮಹಾನ್ ಕ್ರೀಡಾಪಟು, ಅವರನ್ನು ನಾವು ಕಳೆದುಕೊಂಡಿದ್ದೇವೆ. ಅಸಂಖ್ಯಾತ ಭಾರತೀಯರ ಹೃದಯದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ. ಅವರ ವ್ಯಕ್ತಿತ್ವವು ಲಕ್ಷಾಂತರ ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ" ಎಂದು ತಿಳಿಸಿದ್ದಾರೆ.
"ನಾನು ಕೆಲವು ದಿನಗಳ ಹಿಂದೆ ಮಿಲ್ಖಾ ಸಿಂಗ್ ಅವರೊಂದಿಗೆ ಮಾತನಾಡಿದ್ದೇನೆ. ಇದು ನಮ್ಮ ಕೊನೆಯ ಸಂಭಾಷಣೆ ಎಂದು ನನಗೆ ತಿಳಿದಿರಲಿಲ್ಲ. ಅವರ ಜೀವನವು ಅನೇಕ ಉದಯೋನ್ಮುಖ ಕ್ರೀಡಾಪಟುಗಳಿಗೆ ಬಲವನ್ನು ನೀಡುತ್ತದೆ. ಅವರ ಕುಟುಂಬ ಮತ್ತು ವಿಶ್ವದಾದ್ಯಂತದ ಅಭಿಮಾನಿಗಳಿಗೆ ನನ್ನ ಸಂತಾಪ" ಎಂದು ಹೇಳಿದ್ದಾರೆ.
Read These Next
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ತೆರೆ; ಮುಖ್ಯಮಂತ್ರಿಯಾಗಿ ಶಿಂದೆ; ಡಿಸಿಎಂ ಸ್ಥಾನಕ್ಕೆ ಫಡ್ನವೀಸ್ ತ್ಯಪ್ತಿ
ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂದೆ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿ ನಾಯಕ ಹಾಗೂ ಮಾಜಿ ...
ಮಹಾರಾಷ್ಟ ಬಿಕ್ಕಟ್ಟು; ವಿಶ್ವಾಸ ಮತಕ್ಕೆ ಮುನ್ನವೇ ಉದ್ಧವ್ ರಾಜೀನಾಮೆ
ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಯಾಚಿಸುವಂತೆ ಎಂವಿಎ ಸರಕಾರಕ್ಕೆ ರಾಜ್ಯಪಾಲ ಭಗತಸಿಂಗ್ ಕೋಶಿಯಾರಿ ಅವರ ಆದೇಶವನ್ನು ...
ರಾಜಸ್ಥಾನ: ನೂಪುರ್ ಶರ್ಮಾರನ್ನು ಬೆಂಬಲಿಸಿದಾತನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಸೆರೆ
ಬಿಜೆಪಿಯ ಅಮಾನತುಗೊಂಡ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆಂಬಲ ನೀಡಿದ ಟೈಲರ್ ಓರ್ವರನ್ನು ರಾಜಸ್ಥಾನದ ಉದಯಪುರದಲ್ಲಿರುವ ಅವರ ...
ಮಹಾ ಬಿಕ್ಕಟ್ಟು: ಮಾತುಕತೆಗೆ ಮುಂಬೈಗೆ ಮರಳಿ ಬನ್ನಿ; ಬಂಡುಕೋರ ಶಾಸಕರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪತ್ರ
ಮಹಾರಾಷ್ಟ್ರದ ಮುಖ್ಯ ಮಂತ್ರಿ ಉದ್ಧವ್ ಠಾಕ್ರೆಯವರು ಮಂಗಳವಾರ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡುಕೋರ ಶಿವಸೇನೆ ಶಾಸಕರಿಗೆ ...
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ; 'ಆಲ್ಟ್ ನ್ಯೂಸ್'ನ ಝುಬೈರ್ ಬಂಧನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ದ್ವೇಷ ಉತ್ತೇಜನದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಸತ್ಯ ಪರಿಶೀಲನೆ ವೆಬ್ಸೈಟ್ 'ಆಲ್ಟ್ ...
ಟೇಸ್ಟಾ ಸೆಟಲ್ವಾಡ್ ಬಂಧನಕ್ಕೆ ವಿರೋಧ; ದೇಶಾದ್ಯಂತ ಪ್ರತಿಭಟನೆ; ರಾಜ್ಯದ ವಿವಿಧೆಡೆ ಧರಣಿ
2002ರ ಗೋಧ್ರಾ ದಂಗೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರಾಗಿದ್ದ ಝಕಿಯಾ ಜಾಫ್ರಿಯವರ ಬೆಂಬಲಕ್ಕೆ ...
ರಣಜಿ ಟ್ರೋಫಿ 2022 ಫೈನಲ್: ಇತಿಹಾಸ ಬರೆದ ಮಧ್ಯ ಪ್ರದೇಶ; 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯ
ರಣಜಿ ಟ್ರೋಫಿ 2022 ಫೈನಲ್: ಇತಿಹಾಸ ಬರೆದ ಮಧ್ಯ ಪ್ರದೇಶ; 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯ
ಅಂತರಾಷ್ಟ್ರೀಯ ಕ್ರಿಕೆಟ್ಗೆ ಮಿಥಾಲಿ ರಾಜ್ ವಿದಾಯ
ಭಾರತದ ಓರ್ವ ಶ್ರೇಷ್ಠ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಎಲ್ಲ ಮಾದರಿಯ ಕ್ರಿಕೆಟ್ನಿಂದ ಬುಧವಾರ ನಿವೃತ್ತಿ ಪ್ರಕಟಿಸಿದ್ದಾರೆ. ...
ಮೂಡುಬಿದಿರೆ: ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್: ಭಾರತೀಯ ರೈಲ್ವೇ ಹಾಗೂ ಕೆನರಾ ಬ್ಯಾಂಕ್ ಮುನ್ನಡೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಬಾಲ್ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾದ ಸಹಭಾಗಿತ್ವದಲ್ಲಿ ನಡೆಯುತ್ತಿರುವ 67ನೇ ...
ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಗೆಲುವು
ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಗೆಲುವು
ಮೊದಲ ಬಾರಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯ; ವಾರ್ನರ್, ಮಾರ್ಷ್ ಅಬ್ಬರದ ಬ್ಯಾಟಿಂಗ್
ಆಲ್ರೌಂಡರ್ ಮಿಚೆಲ್ ಮಾರ್ಷ್ (ಔಟಾಗದೆ 77, 50 ಎಸೆತ, 6 ಬೌಂಡರಿ, 4 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ (53, 38 ಎಸೆತ, 4 ...
ಮುಂದುವರಿದ ಭಾರತದ ಪದಕ ಬೇಟೆ; 1 ಬೆಳ್ಳಿ, 2 ಕಂಚು
ಹಾಲಿ ಚಾಂಪಿಯನ್ ಮಾರಿಯಪ್ಪನ್ ತಂಗವೇಲು ಹಾಗೂ ಶರದ್ ಕುಮಾರ್ ಮಂಗಳವಾರ ನಡೆದ ಪ್ಯಾರಾಲಿಂಪಿಕ್ಸ್ನ ಪುರುಷರ ಹೈಜಂಪ್ ಟಿ42 ವಿಭಾಗದ ...
ರಾಜ್ಯದ ಯುವ ಜನತೆಗೆ ಉದ್ಯೋಗ ನೀಡಲು ಸ್ಕಿಲ್ ಕನೆಕ್ಟ್ ಪೋರ್ಟಲ್ : ಸಚಿವ ಡಾ.ಅಶ್ವಥ್ ನಾರಾಯಣ್
ಉಡುಪಿ : ರಾಜ್ಯದ ಯುವಜನತೆಗೆ ಅವರ ಕನಸಿನ ಉದ್ಯೋಗ ಪಡೆಯಲು ಸಹಕಾರಿಯಾಗುವಂತೆ ಎಲ್ಲಾ ಅಗತ್ಯ ಮಾಹಿತಿ ಹಾಗೂ ನೆರವು ನೀಡುವ ಸ್ಕಿಲ್ ...
ತುರ್ತು ಪರಿಸ್ಥಿತಿ ನಿರ್ವಹಣೆ ಪ್ರಾತ್ಯಕ್ಷಿಕೆ
ಧಾರವಾಡ : ಅಗ್ನಿ ಅವಘಡಗಳು, ನೈಸರ್ಗಿಕ ವಿಕೋಪಗಳು, ಸಾಂಕ್ರಾಮಿಕಗಳು ಮೊದಲಾದ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಅನುಸರಿಸಬೇಕಾದ ...
ಮಹಾ ಬಿಕ್ಕಟ್ಟು: ಮಾತುಕತೆಗೆ ಮುಂಬೈಗೆ ಮರಳಿ ಬನ್ನಿ; ಬಂಡುಕೋರ ಶಾಸಕರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪತ್ರ
ಮಹಾರಾಷ್ಟ್ರದ ಮುಖ್ಯ ಮಂತ್ರಿ ಉದ್ಧವ್ ಠಾಕ್ರೆಯವರು ಮಂಗಳವಾರ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡುಕೋರ ಶಿವಸೇನೆ ಶಾಸಕರಿಗೆ ...
ಅಗ್ನಿವೀರ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಭಾರತೀಯ ವಾಯುಪಡೆಯು ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ...
ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು : ಸಚಿವ ಶಿವರಾಮ್ ಹೆಬ್ಬಾರ್
ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ...
ಕಾರ್ಮಿಕರ ವಿಸ್ತೃತ ವಸತಿ ಸಮುಚ್ಚಯ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ : ಅರಬೈಲು ಶಿವರಾಮ್ ಹೆಬ್ಬಾರ್
ಶಿವಮೊಗ್ಗ : ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ 10 ಎಕರೆ ಜಾಗದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ 500ಮಂದಿ ಕಟ್ಟಡ ಮತ್ತು ಇತರೆ ...