ಭಟ್ಕಳ: ಶಿರಾಲಿಯ ವೆಂಕಟಾಪುರದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ರಥೋತ್ಸವ ಶನಿವಾರ ರಥ ಸಪ್ತಮಿಯಂದು ಸಂಜೆ ಸಾವಿರಾರು ಭಕ್ತರ ಜಯಘೋಷದೊಂದಿಗೆ ದೇವಸ್ಥಾನದ ಸುತ್ತಲೂ ಎಳೆಯುವ ಮೂಲಕ ಸಂಪನ್ನಗೊಡಿತು. ಪ್ರತಿ ವರ್ಷದಂತಗೆ ಕಳೆದ ಐದು ದಿನಗಳಿಂದ ರಥೋತ್ಸವದ ಅಂಗವಾಗಿ ಧಾರ್ಮಿಕ ವಿಧಿ ವಿದಾನಗಳನ್ನು ವೆಂಕಟಾಪುರದ ಅರ್ಚಕ ಕುಟುಂಬದವರಾದ ಆಚಾರ್ಯ ಕುಟುಂಬಿಕರು ನೆರವೇರಿಸಿಕೊಂಡು ಬಂದಿದ್ದು ರಥ ಸಪ್ತಮಿಯಂದು ಮಹಾ ರಥೋತ್ಸವ ಜರುಗಿತು.
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಶಾಖಾ ಮಠಗಳಲ್ಲಿ ಒಂದಾಗಿರುವ ಇದು ಶಿರಾಲಿಯ ಜಿಎಸ್ಬಿ ಸಮಾಜ ಬಾಂಧವರು ಆರಾಧಿಸಿಕೊಂಡು ಬಂದಿರುವ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿದೆ. ಶ್ರೀ ವೆಂಕಾಟಾಪುರ ಲಕ್ಷಿö್ಮÃ ವೆಂಕಟೇಶ ದೇವರನ್ನು ತಿರುಪತಿ ವೇಂಕಟೇಶ್ವರನ ಪ್ರತಿಸಾಕ್ಷಿ ಎಂದು ನಂಬಿದ್ದ ಜನರು ಈ ಹಿಂದೆ ತಿರುಪತಿಗೆ ಹೊತ್ತ ಹರಿಕೆಯನ್ನು ಕಾರಣಾಂತರದಿAದ ತೀರಿಸಲು ಸಾಧ್ಯವಾಗದೇ ಇದ್ದಾಗ ಇಲ್ಲಿಗೆ ಬಂದು ತಮ್ಮ ಕಾಣಿಕೆಯನ್ನು ಸಲ್ಲಿಸುತ್ತಿದ್ದು ಅದು ಪ್ರತ್ಯಕ್ಷವಾಗಿ ತಿರುಪಿಗೆ ತಲುಪಿಸಿದಂತೆ ಎಂದು ಭಾವುಕ ಭಕ್ತರು ಭಾವಿಸುತ್ತಿದ್ದರು. ರಥೋತ್ಸವ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಕಮಿಟಿ ಅಧ್ಯಕ್ಷ ಅಶೋಕ ಪೈ ಸೇರಿದಂತೆ ಪದಾಧಿಕಾರಿಗಳು, ಭಕ್ತರು ಬಹು ಸಂಖ್ಯೆಯಲ್ಲಿ ನೆರೆದಿದ್ದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...