ಶ್ರೀನಿವಾಸಪುರ: ವೈರಾಣು ನಿರೋಧಕ ಔಷಧ ಸಿಂಪಡಣೆ

Source: sonews | By Staff Correspondent | Published on 28th March 2020, 10:08 PM | State News |

ಶ್ರೀನಿವಾಸಪುರ:  ಅಡ್ಡಗಲ್‌ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಯಿತು.

ಆರೋಗ್ಯ ನಿರೀಕ್ಷಕ ಸುಬ್ರಮಣಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ತಡೆಗೆ ಗ್ರಾಮಸ್ಥರು ಸಹಕರಿಸಬೇಕು. ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶದಲ್ಲೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹೊರಗಡೆಯಿಂದ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರ ವಹಿಸಬೇಕು. ಕೊರೊನಾ ರೋಗದ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರಿಗೆ ತಿಳಿಸಬೇಕು ಎಂದು ಹೇಳಿದರು.

ಪಿಡಿಒ ಚಂದ್ರಪ್ರಕಾಶ್‌, ಆರೋಗ್ಯ ನಿರೀಕ್ಷಕ ಹರೀಶ್‌, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...