ಶ್ರೀನಿವಾಸಪುರ: ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಿ; ಜಿ.ಕೆ.ವೆಂಕಟಶಿವಾರೆಡ್ಡಿ

Source: Shabbir Ahmed | By S O News | Published on 3rd August 2021, 11:40 PM | State News |

ಶ್ರೀನಿವಾಸಪುರ: ಅಧಿಕಾರಿಗಳು ಇಂದಿರಾ ನಗರದ ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ಅಥವಾ ಮನೆ ಸಿಗದ ಪಕ್ಷದಲ್ಲಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಪಟ್ಟಣದ ಇಂದಿರಾ ನಗರದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, 'ನಾನು ಶಾಸಕನಾಗಿದ್ದಾಗ ಬಡವರನ್ನು ಗುರುತಿಸಿ ಮನೆ ನಿವೇಶನ ವಿತರಣೆ ಮಾಡಿದ್ದೆ. ಹಕ್ಕು ಪತ್ರಗಳಲ್ಲಿ ಸಣ್ಣ ಪುಟ್ಟ ತಪ್ಪುಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಿ ಕೊಡಬೇಕು. ಭೇದ ಭಾವ ಇಲ್ಲದಂತೆ ಫಲಾನುಭವಿಗಳನ್ನು ನಡಿಸಿಕೊಳ್ಳಬೇಕು' ಎಂದು ಹೇಳಿದರು.

ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯ ಬಿ.ವೆಂಕಟರೆಡ್ಡಿ, ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್, ರಾಜೇಶ್ವರಿ, ನಾಗೇಶ್, ಪೊಲೀಸ್ ಇನ್ಸ್‍ಪೆಕ್ಟರ್ ರವಿಕುಮಾರ್ ಇದ್ದರು.

ಶ್ರೀನಿವಾಸಪುರದ ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನೆ ನಿವೇಶನಗಳ ತಪಾಸಣೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ವೈ. ಎನ್. ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್ ಇದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...