ಶ್ರೀನಿವಾಸಪುರ: ಈ ಹಿಂದಿನ ಅಧ್ಯಕ್ಷೆ ರತ್ನಮ್ಮ ನಾಗರಾಜ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಸಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನಕ್ಕೆ ಜಬೀನ್ ತಾಜ್ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಮಾಡಲಾಯಿತು.
ತಹಶೀಲ್ದಾರ್ ಕಮಲಾಬಾಯಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಅಧ್ಯಕ್ಷರ ಆಯ್ಕೆ ಬಳಿಕ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ಮಾಡಿದರು.
ನೂತನ ಅಧ್ಯಕ್ಷೆ ಜಬೀನ್ ತಾಜ್ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆ ವ್ಯಕ್ತಿಪಡಿಸಿ ಮಾತನಾಡಿ, ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಎಲ್ಲ ಸದಸ್ಯರ ಸಹಕಾರ ಪಡೆದು ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಪುರಸಭೆ ಉಪಾಧ್ಯಕ್ಷ T.M.B ಮುಕ್ತಿಯಾರ್ ಅಹ್ಮದ್, ಮುಖ್ಯಾಧಿಕಾರಿ ಸತ್ಯನಾರಾಯಣ, ಸದಸ್ಯರಾದ ಬಿ.ಎಲ್.ಪ್ರಕಾಶ್, ರಮೇಶ್, ಸತ್ಯನಾರಾಯಣ, ಮುನಿರಾಜು, ವೆಂಕಟೇಶರೆಡ್ಡಿ, ಮುಖಂಡರಾದ ನಾರಾಯಣಸ್ವಾಮಿ ಸುರೇಶ್ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ