ಭಟ್ಕಳ : ಪ್ರಸ್ತುತ ಸಾಲಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದೆ.
ಉತ್ತರಕನ್ನಡ ಜಿಲ್ಲೆ ಏಳು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಕಾರವಾರ ಶೈಕ್ಷಣಿಕ ಜಿಲ್ಲೆಯ ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಶಾಲೆಯ ಮೇಘನಾ ಭಟ್, ಕಾರ್ತಿಕ್ ಭಟ್ ಹಾಗೂ ದೀಕ್ಷಾ ನಾಯ್ಕ 625ರಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಇನ್ನೂ ಶಿರಸಿ ಶೈಕ್ಷಣಿಕ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮರಾಗಿದ್ದಾರೆ. ಶರ್ಮಿನಾ ಶೇಖ್, ತುಷಾರ್ ಶಾನಬಾಗ್, ಚಿರಾಗ್ ನಾಯ್ಕ, ಕನ್ನಿಕಾ ಪರಮೇಶ್ವರಿ ಹೆಗಡೆ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲಿಗರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು 145 ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿದ್ದಾರೆ. ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. 7,30,881 ಮಕ್ಕಳು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.