ರಾಜ್ಯಾದ್ಯಂತ ನಡೆಯುವ ಎಸ್‌ಎಸ್.ಎಲ್.ಸಿ ಪೂರ್ವಭಾವಿ ಪರೀಕ್ಷೆಗಳನ್ನು ಮಂಡಳಿಯೇ ನಿರ್ವಹಿಸಲಿ

Source: S O News service | By Staff Correspondent | Published on 7th March 2017, 6:43 PM | Coastal News | Public Voice | Don't Miss |


ಎಂ.ಆರ್.ಮಾನ್ವಿ 

ಕರ್ನಾಟಕ ರಾಜ್ಯದಲ್ಲಿ ಪ್ರತಿವರ್ಷ ೮ ರಿಂದ ೯ ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಎದುರಿಸುತ್ತಿದ್ದು ಫೆಬ್ರುವರಿ ತಿಂಗಳಿಂದ ಎಸ್.ಎಸ್.ಎಲ್.ಸಿ ಪೂರ್ವಭಾವಿ ಪರೀಕ್ಷೆಗಳು ಆರಂಭಗೊಳ್ಳುತ್ತವೆ.  ಇದಕ್ಕಾಗಿ ಶಾಲಾ ಹಂತದಲ್ಲಿ ಮತ್ತು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಜಿಲ್ಲಾ ಮುಖ್ಯೋಪಾಧ್ಯಾಯರ ಸಂಘವು ಜಿಲ್ಲಾ ಮಟ್ಟದಲ್ಲಿ ಹಾಗೂ ರಾಜ್ಯ ಮುಖ್ಯೋಪಾಧ್ಯಯರ ಸಂಘವು ರಾಜ್ಯಮಟ್ಟದಲ್ಲಿ ಪರೀಕ್ಷೆಗಳನ್ನು ನಡೆಸಲು ಬೇಕಾದ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಮುದ್ರಿಸಿ ಆಯಾ ಶಾಲೆಗಳಿಗೆ ಪ್ರತಿ ವಿದ್ಯಾರ್ಥಿಗೆ ೩೦ ರೂ ನಂತೆ ಹಣವನ್ನು ಪಡೆಯಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಶಾಲೆಯಿಂದ ಬೇಡಿಕೆಪತ್ರದೊಂದಿಗೆ ಹಣವನ್ನು ಕಳುಹಿಸಲಾಗುತ್ತಿದೆ. ಇದರಲ್ಲಿ ಕೋಟ್ಯಾಂತರ ರೂ ವ್ಯವಹಾರ ನಡೆಯುತ್ತಿದೆ. ಆದರೆ ಕೆಲ ಶಾಲೆಗಳಿಗೆ ಹಣ ತುಂಬಿದ್ದಾಗ್ಯೂ ನಿಗಧಿತ ಪ್ರಮಾಣದಲ್ಲಿ ಉತ್ತರಪತ್ರಿಕೆಯನ್ನು ಕಳುಹಿಸದೆ ಜಿಲ್ಲಾ ಹಾಗೂ ರಾಜ್ಯ ಸಂಘಗಳು ವಂಚಿಸುತ್ತಿವೆ. 

ಈ ವರ್ಷ ಬೆಳಗಾವಿ ವಿಭಾಗಮಟ್ಟದಲ್ಲಿ ಪ್ರತ್ಯೇಕ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿದ್ದು ಹಲವಾರು ಶಾಲೆಗಳಿಗೆ ಉತ್ತರಪತ್ರಿಕೆ ಹಾಗೂ ಪ್ರಶ್ನೆ ಪತ್ರಿಕೆ ಕಳುಹಿಸದೆ ಕೊನೆಯ ಹಂತದ ವರೆಗೂ ವಿದ್ಯಾರ್ಥಿ ಹಾಗೂ ಶಾಲಾ ಮುಖ್ಯಸ್ಥರು ಗೊಂದಲದಲ್ಲಿ ಸಿಲುಕವಂತೆ ಮಾಡಿದ್ದು ಅಲ್ಲದೆ ಹಣವನ್ನು ಪಡೆದುಕೊಂಡೂ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಪರೀಕ್ಷಾ ಸಾಮಾಗ್ರಿಗಳನ್ನು ರವಾನಿಸದೆ ವಂಚಿಸಿದ್ದಾರೆ. 

ಅಲ್ಲದೆ ರಾಜ್ಯಮಟ್ಟದಲ್ಲಿ ದಿ.೬.೦೩.೧೭ರಿಂದ ನಡೆಯಬೇಕಾಗಿದ್ದ ಪೂರ್ವಭಾವಿಪರೀಕ್ಷೆಯ ಉತ್ತರ ಹಾಗೂ ಪ್ರಶ್ನೆಪತ್ರಿಕೆಗಳನ್ನು ಸರಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿಯ ಮಾದರಿಯಲ್ಲಿ ಕಳುಹಿಸದೆ ಹಳೆಯ ಮಾದರಿಯ ಉತ್ತರಸಹಿತ ಪ್ರಶ್ನೆಪತ್ರಿಕೆಗಳನ್ನು ಕಳುಹಿಸಿದ್ದು ಈಗ ಮಾನ್ಯ ಆಯುಕ್ತರು ಅದನ್ನು ರದ್ದುಗೊಳಿಸಿ ಆದೇಶವನ್ನು ನೀಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಹಣ ನೀಡಿಯೂ ಪರೀಕ್ಷೆಯನ್ನು ಬರೆಯದ ಸ್ಥಿತಿಯನ್ನು ನಿರ್ಮಿಸಿದಂತಾಗಿದೆ. ಅಲ್ಲದೆ ಈಗಾಗಲೆ ಹಣವನ್ನು ಭರಿಸಿದ ಶಾಲೆಗಳು ಹಣ ಹೊರೆಯನ್ನು ಹೊರಬೇಕಾಗಿ ಬಂದಿದೆ. 

ಆದ್ದರಿಂದ ಮುಂದಿನ ವರ್ಷಗಳಲ್ಲಿ ಎಸ್.ಎಸ್.ಎಲ್.ಸಿ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುವ ಹೊಣೆಗಾರಿಕೆಯನ್ನು ವಾರ್ಷೀಕ ಪರೀಕ್ಷೆಯ ಮಾದರಿಯಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೆ ನಿರ್ವಹಿಸಿ ವಿದ್ಯಾರ್ಥಿಗಳ ಗೊಂದಲಗಳಿಗೆ ತೆರೆ ಎಳೆಯಬೇಕೆಂದು ಈ ಮೂಲಕ ವಿನಂತಿಸಿಕೊಳ್ಳಲಾಗುತ್ತಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...