ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Source: S O News | By I.G. Bhatkali | Published on 31st March 2024, 12:38 PM | Coastal News |

ಕಾರವಾರ: 12 ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅಗತ್ಯವಿರುವ ಸಿಬ್ಬಂದಿಗಳ ನಿಯೋಜನೆ ಕುರಿತ ರ‍್ಯಾಂಡಮೈಸೇಷನ್ ಕಾರ್ಯ ಇಂದು ನಡೆದಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯದ ಆದೇಶ ಪತ್ರಗಳನ್ನು ಸ್ವೀಕರಿಸಿ, ಚುನಾವಣಾ ಕರ್ತವ್ಯಕ್ಕೆ ತಪ್ಪದೇ ಹಾಜರಾಗುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಚುನವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆಯ ರ‍್ಯಾಂಡಮೈಸೇಷನ್ ನಡೆಸಿ ಮಾತನಾಡಿದರು.

12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ವ್ಯಾಪ್ತಿಯಲ್ಲಿ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿದ್ದು ಇಂದು ರ‍್ಯಾಂಡಮೈಸೇಷನ್ ಮೂಲಕ ಸಂಬAದಪಟ್ಟ ಮತಗಟ್ಟೆಗಳ ಕರ್ತವ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಈ ಕುರಿತು ಆದೇಶ ಪತ್ರಗಳನ್ನು ಸಂಬAದಪಟ್ಟ ತಹಸೀಲ್ದಾರ್ ಕಚೇರಿ ಮತ್ತು ಸಂಬAದಪಟ್ಟ ಇಲಾಖೆಗಳ ಅಧಿಕಾರಿಗಳ ಮೂಲಕ ಎಲ್ಲಾ ಸಿಬ್ಬಂದಿಗೆ ತಲುಪಿಸಲಾಗುವುದು ಎಂದರು. 

ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿರುವ ಎಲ್ಲಾ ಸಿಬ್ಬಂದಿಗಳು ಮೊದಲ ಹಂತದಲ್ಲಿ ಅವರು ಕರ್ತವ್ಯ ನಿರ್ವಹಿಸುವ ತಾಲೂಕುಗಳಲ್ಲಿ ಏಪ್ರಿಲ್ 16 ರಂದು ತರಬೇತಿ ಆಯೋಜಿಸಲಾಗಿದ್ದು, ತರಬೇತಿ ಸಮಯದಲ್ಲಿ ಸಿಬ್ಬಂದಿಗೆ ಇ.ವಿ.ಎಂ ಮತ್ತು ವಿವಿ ಪ್ಯಾಟ್ ಗಳ ಬಳಕೆ ಸೇರಿದಂತೆ ಎಲ್ಲಾ ರೀತಿಯ ಸಮಗ್ರ ತರಬೇತಿಯ ಜೊತೆಗೆ , ಅಂಚೆ ಮತದಾನ ಮಾಡಲು ಅಗತ್ಯವಿರುವ ಫಾರಂ ಗಳ ವಿತರಣೆ ಕೂಡಾ ಮಾಡಲಾಗುವುದು ಎಂದರು. 

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಎಲ್ಲಾ ಸಿಬ್ಬಂದಿಗಳು ತಮ್ಮ ಆದೇಶಪತ್ರಗಳನ್ನು ಸ್ವೀಕರಿಸಿ, ಕಡ್ಡಾಯವಾಗಿ ತರಬೇತಿಯಲ್ಲಿ ಭಾಗವಹಿಸಬೇಕು. ಈ ಕುರಿತಂತೆ ನಿರ್ಲಕ್ಷö್ಯ ವಹಿಸುವ ಸಿಬ್ಬಂದಿಗಳ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಚುನಾವಣಾ ಅನುಮತಿ ಪಡೆಯುವ ಬಗ್ಗೆ
12 ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತಂತೆ , ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ವಿವಿಧ ರೀತಿಯ ಅನುಮತಿಗಳಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...