ಭಟ್ಕಳ: ಮೈಸೂರಿನಲ್ಲಿ ಇಂದು ನಡೆದ ರಾಜ್ಯಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಟ್ಕಳದ ಇಸ್ಲಾಮಿ ಆಂಗ್ಲೋ ಉರ್ದು ಪ್ರೌಢಶಾಲೆ ವಿದ್ಯಾರ್ಥಿ ಖುಬೈಬ್ ಆಹ್ಮದ್ ಅಕ್ರಮಿ ದ್ವಿತೀಯಾ ಸ್ಥಾನ ಪಡೆಯುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ.
ಇಲ್ಲಿನ ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ನ ಪ್ರಧಾನ ಖಾಝಿಯಾಗಿರುವ ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ನದ್ವಿ ಯವರ ಪುತ್ರನಾಗಿರುವ ಖುಬೈಬ್ ಶಾಲಾ ಹಂತದಿಂದ ವಲಯ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟದ ಉರ್ದು ಭಾಷಣ ಸ್ಪರ್ಧೆಗೆ ಆಯ್ಕೆಗೊಂಡಿದ್ದನು.
ರಾಜ್ಯದ 34 ಜಿಲ್ಲೆಗಳಿಂದ 68 ವಿದ್ಯಾರ್ಥಿಗಳು ಉರ್ದು ಭಾಷಣ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು. ಆ ಎಲ್ಲ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ರಾಜ್ಯಕ್ಕೆ ದ್ವಿತೀಯಾ ಸ್ಥಾನ ಪಡೆಯುವುದರ ಮೂಲಕ ಭಟ್ಕಳ ತಾಲೂಕು ಹಾಗೂ ಉತ್ತರಕನ್ನಡ ಜಿಲ್ಲೆಯ ಹೆಸರನ್ನು ರಾಜ್ಯಮಟ್ಟದಲ್ಲಿ ಪಸರಿಸಲು ಕಾರಣನಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಕ ವರ್ಗ ಅಭಿನಂದಿಸಿದೆ.