ದಲಿತರು ಹಾಗು ಮುಸ್ಲಿಮರ ಮೇಲೆ ಹೇಗೆ ಸುಳ್ಳು ಕೇಸು ಜಡಿಯುತ್ತೇನೆ ಎಂದು ಮಹಿಳಾ ಪೊಲೀಸ್ ಅಧಿಕಾರಿ ಹೇಳುತ್ತಿರುವ ವಿಡೀಯೋ ವೈರಲ್

Source: sonews | By Staff Correspondent | Published on 2nd December 2018, 11:57 PM | National News | Special Report | Don't Miss |

ಮಹಾರಾಷ್ಟ್ರ: ದಲಿತರು ಮತ್ತು ಮುಸ್ಲಿಮರ ವಿರುದ್ಧ ತಾನು ಹೇಗೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತೇನೆ ಎಂದು ಮಹಾರಾಷ್ಟ್ರದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಿರುವ ವಿಡಿಯೋವೊಂದು ವಿವಾದ ಸೃಷ್ಟಿಸಿದೆ. ಈ ಬಗ್ಗೆ scroll.in ವರದಿ ಮಾಡಿದೆ.

“ನಾನು ದಲಿತರ ಕೈ ಮತ್ತು ಕಾಲುಗಳನ್ನು ಕಟ್ಟಿ ಹಾಕಿ ನನ್ನ ಕೋಪವನ್ನು ಅದರ (ದೌರ್ಜನ್ಯ ಕಾಯ್ದೆ) ವಿರುದ್ಧ ಅವರ ಮೇಲೆ ತೀರಿಸಿಕೊಳ್ಳುತ್ತೇನೆ” ಎಂದು ಮಹಾರಾಷ್ಟ್ರದ ಮಜಲ್ಗಾಂವ್ ನ ಡಿವೈಎಸ್ ಪಿ ಭಾಗ್ಯಶ್ರೀ ನವ್ಟಾಕೆ ಎನ್ನುವವರು ಹೇಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯನ್ವಯ ದೂರು ನೀಡಲು ಬಂದಿದ್ದ 21 ದಲಿತರ ವಿರುದ್ಧ ತಾನು ತನ್ನ ಜೊತೆಗಿದ್ದ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದೇನೆ. ಭಾರತೀಯ ದಂಡಸಂಹಿತೆಯ 307 ಸೆಕ್ಷನ್ ನಡಿ ಅಥವಾ ಕೊಲೆಯತ್ನ ಪ್ರಕರಣಗಳನ್ನು ತಾನು ಮುಸ್ಲಿಮರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದೇನೆ. ಆದ್ದರಿಂದ ಅವರಿಗೆ ಸುಲಭವಾಗಿ ಜಾಮೀನು ಸಿಗುವುದಿಲ್ಲ ಎಂದು ವಿಡಿಯೋದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಹೇಳುವುದು ಕೇಳಿಸುತ್ತದೆ.

ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲ್ಪಟ್ಟ ಮರಾಠಾ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿ ಜೊತೆಗೆ ಮಾತುಕತೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ತಾನು ಈಗ ನಿನ್ನನ್ನು ಬಿಡುಗಡೆಗೊಳಿಸಿದರೆ ಆಕ್ರೋಶಗಳು ವ್ಯಕ್ತವಾಗಬಹುದು ಎಂದು ಮಹಿಳಾ ಅಧಿಕಾರಿ ಆತನಿಗೆ ಹೇಳುತ್ತಾರೆ.

ತಾನು ಪುಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಇಂತಹ ಪ್ರಕರಣಗಳನ್ನು ಹೇಗೆ ನಿಭಾಯಿಸಿದ್ದೆ ಎಂದೂ ಇದೇ ಸಂದರ್ಭ ಆಕೆ ವಿವರಿಸಿದ್ದಾರೆ. ಆ ಪ್ರಕರಣದಲ್ಲಿ ಮೂರು ದಿನಗಳ ಕಾಲ ಆಕೆ ಮರಾಠರನ್ನು ಬಂಧಿಸಿರಲಿಲ್ಲ, ಬದಲಾಗಿ ದಲಿತರ ವಿರುದ್ಧ ಹೇಗೆ ಪ್ರಕರಣ ದಾಖಲಿಸಬಹುದೆಂದು ಆಕೆ ಹೇಳಿದ್ದಾಗಿ ಆ ವ್ಯಕ್ತಿ ನೆನಪಿಸುತ್ತಾನೆ. ಇದೇ ಸಂದರ್ಭ ಭಾರತೀಯ ದಂಡಸಂಹಿತೆಯ ಸೆಕ್ಷನ್ 122ರಡಿ ದಲಿತರ ವಿರುದ್ಧ ಪ್ರಕರಣ ದಾಖಲಿಸುವಂತೆ ಅಧಿಕಾರಿ ಆರೋಪಿಗಳಿಗೆ ಸಲಹೆ ನೀಡುವುದು ವಿಡಿಯೋದಲ್ಲಿ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಸ್ಕ್ರೋಲ್ ಡಾಟ್ ಇನ್ ನವ್ಟಾಕೆಯವರನ್ನು ಸಂಪರ್ಕಿಸಿದ್ದು, ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ.

 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...