ಭಟ್ಕಳ ಹಳೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಹುಚ್ಚು ನಾಯಿ ದಾಳಿ

Source: so news | By MV Bhatkal | Published on 15th June 2019, 12:17 AM | Coastal News | Don't Miss |


ಭಟ್ಕಳ :ತಾಲೂಕಿನಾದ್ಯಂತ ಹುಚ್ಚು ನಾಯಿ ಹಾವಳಿ ಹೆಚ್ಚಾಗಿದ್ದು ಒಂದು ವಾರದ ಹಿಂದಷ್ಟೇ ಮುಂಡಳ್ಳಿ ವ್ಯಾಪ್ತಿಯ ವೃದ್ಧೆಯನ್ನು ಕಚ್ಚಿ ಸಾಯಿಸಿದ್ದು.ಈಗ ಮತ್ತೆ ಇಲ್ಲಿನ ಹಳೆ ಬಸ್ ನಿಲ್ದಾಣದ ಹತ್ತಿರ ಗುರುವಾರ ರಾತ್ರಿ ಅಂಗಡಿ ಹತ್ತಿರ ಮಲಗಿದ್ದ ವ್ಯಕ್ತಿಯ ಮೇಲೆ ಹುಚ್ಚುನಾಯಿ ದಾಳಿ ಮಾಡಿದ ಘಟನೆ ನಡೆದಿದೆ.
ವಾರದ  ಹಿಂದಷ್ಟೇ ಮುಂಡಳ್ಳಿ ಜಟ್ಟಮ್ಮ ಎಂಬ ವೃದ್ಧೆ ತನ್ನ ಮನೆಯ ಹೊರಗಡೆ ಮೂತ್ರ ವಿಸರ್ಜನೆ ತೆರಳಿದ ವೇಳೆ ಏಕಾಏಕಿ ಎರಗಿ ಮುಖದ ಭಾಗವನ್ನು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನಡೆದ ಬೆನ್ನಲ್ಲೇ ಕಳೆದ ತಡರಾತ್ರಿ ತಾಲೂಕಿನ ಹಳೆ ಬಸ್ ಸ್ಟೆಂಡ್ ಸಮೀಪ ಮುಂಡಳ್ಳಿ ವ್ಯಕ್ತಿ ದುರ್ಗಪ್ಪ ನಾಯ್ಕ ಎನ್ನುವ ವ್ಯಕ್ತಿಗೆ
ಮುಖದ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ ಈತ ದಿನ ನಿತ್ಯ  ಹಳೆ ಬಸ್ ಸ್ಟೆಂಡ್ ಸಮೀಪದ ಅಕ್ಕ ಪಕ್ಕದ ಅಂಗಡಿಯಲ್ಲಿ ಮಲಾಗುತ್ತಿದ್ದ ಎಂದು ಹೇಳಲಾಗುತ್ತಿದ್ದೆ. ಸದ್ಯ ಭಟ್ಕಳ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...