ನಾಳೆ ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ

Source: SO News | By Laxmi Tanaya | Published on 4th December 2020, 8:36 PM | State News |

ಕಾರವಾರ : ಕನ್ನಡ ಪರ ಸಂಘಟನೆಗಳು ಕರೆ ನೀಡಿದ ನಾಳೆಯ ಬಂದ್ ಕೈಬಿಡುವಂತೆ 
ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಕಾರವಾರದಲ್ಲಿ ಮಾದ್ಯಮಗಳಿಗೆ ಮಾತನಾಡಿದ ಅವರು,   ಸುಪ್ರಿಮಕೋರ್ಟ್ ಆದೇಶದಂತೆ ಬಂದ್ ಮಾಡುವಂತಿಲ್ಲ. ಬಂದ್ ಮಾಡಿ ಜನಜೀವನ ಅಸ್ತವ್ಯಸ್ತ ಮಾಡುವುದು ಸರಿಯಲ್ಲ. ಪ್ರತಿಭಟನೆ ಮಾಡಲು ಹಲವು ರೀತಿಯಲ್ಲಿ ಅವಕಾಶಗಳಿವೆ. ಹೀಗಾಗಿ ಬಂದ್ ಮಾಡುವುದು ಸರಿಯಲ್ಲ.

ನಾಳೆ ಸರ್ಕಾರಿ ಕಚೇರಿ, ಬಸ್ ಓಡಾಟ ಎಂದಿನಂತಿರಲಿದೆ. ಒತ್ತಾಯದಿಂದ ಬಂದ್ ಮಾಡಿಸಿದರೇ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು  ಎಂದು ಎಚ್ಚರಿಕೆ ನೀಡಿದ್ದಾರೆ. 

ಹೊಸವರ್ಷದ ಸಂದರ್ಭದಲ್ಲಿ ನೈಟ್ ಕರ್ಪ್ಯೂ ಹೇರಿಕೆ ವಿಚಾರಕ್ಕೆ ಪ್ರತಿಕ್ರೀಯಿಸಿದ ಅವರು,  ನೈಟ್ ಕರ್ಪ್ಯೂ ಬಗ್ಗೆ ಹಲವು ಸಲಹೆ ಸೂಚನೆಗಳು ಬಂದಿವೆ. ಮುಖ್ಯಮಂತ್ರಿಗಳು ಇನ್ನೆರಡು ದಿನದೊಳಗೆ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆಂದು ಅವರು ಹೇಳಿದರು

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!