ಸಾಂಪ್ರದಾಯಿಕ ಉಡುಪನ್ನು ಧರಿಸಿ ಮತದಾನ ಜಾಗೃತಿಯನ್ನು ಮೂಡಿಸಿದ ಭಟ್ಕಳದ ಶ್ರೀ ಗುರು ಸುಧೀಂದ್ರ ಬಿಸಿಎ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು.
ಭಟ್ಕಳ: ಇಲ್ಲಿನ ಶ್ರೀ ಗುರು ಸುಧೀಂದ್ರ ಬಿಸಿಎ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾರತೀಯ ಸಂಸ್ಕ್ರತಿಯ ದ್ಯೋತಕವಾಗಿ ಸಾಂಪ್ರದಾಯಿಕ ಉಡುಪನ್ನು ಧರಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಯುವ ಮತದಾರದನ್ನು ಮತದಾನಕ್ಕೆ ಪ್ರೆರೇಪಿಸಲು, ಮತದಾನ ಜಾಗೃತಿಯನ್ನು ಮಾಡಿ ಗಮನಸೆಳೆದರು. ವಿದ್ಯಾರ್ಥಿಗಳು ವಿಭಿನ್ನ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಸಂಭ್ರಮಿಸಿದರು.