ಶಿರಸಿ: ಡಿಸೆಂಬರ್ ೨ ರಂದು ಶಿರಸಿಯಲ್ಲಿ ಜರುಗಿದ, ಕಸ್ತೂರಿ ರಂಗನ್ ವರದಿ ವಿರೋಧ ಜಾಥದಲ್ಲಿ ಜಿಲ್ಲಾದ್ಯಂತ ಬೃಹತ್ ಸಂಖ್ಯೆಯಲ್ಲಿ, ರವೀಂದ್ರ ನಾಯ್ಕ ಅವರ ನೇತ್ರತ್ವದಲ್ಲಿ ಅರಣ್ಯ ಅತಿಕ್ರಮಣದಾರರು ಭಾಗವಹಿಸುವುದರೊಂದಿಗೆ ಅರಣ್ಯವಾಸಿಗಳ ಒಗ್ಗಟ್ಟು ಪ್ರದರ್ಶಿಸಲಾಯಿತು. ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಪ್ರತಿಭಟನಾರ್ಥವಾಗಿ ಸಿಡಿದ್ದೆದ್ದು ಜಾಥದಲ್ಲಿ ಭಾಗವಹಿಸಿದ ಬೃಹತ್ ಅರಣ್ಯವಾಸಿಗಳ ಸಂಖ್ಯೆ ಗಮನಾರ್ಹ.
ಜಿಲ್ಲೆಯ ವಿವಿಧ ಹೋರಾಟದ ಇತಿಹಾಸದಲ್ಲಿಯೇ, ಕಸ್ತೂರಿ ರಂಗನ್ ವರದಿ ವಿರೋಧ ಜಾಥ ದಾಖಲಾರ್ಹ. ನಿರಂತರ ೩೩ ವರ್ಷ ಅರಣ್ಯವಾಸಿಗಳ ಸಮಸ್ಯೆ, ಅರಣ್ಯ ಸಿಬ್ಬಂದಿಗಳ ದೌರ್ಜನ್ಯ, ಕಿರುಕುಳ, ಹೋರಾಟದ ಮೆರವಣಿಗೆ, ರ್ಯಾಲಿ, ಪಾದಯಾತ್ರೆಗೆ ಸೀಮಿತವಾಗಿತ್ತು. ಅರಣ್ಯ ಅತಿಕ್ರಮಣದಾರರ ಹೋರಾಟ ಕಸ್ತೂರಿ ರಂಗನ್ ವರದಿ ಜ್ಯಾರಿಯಾದಲ್ಲಿ ಅರಣ್ಯವಾಸಿಗಳು ಅತಂತ್ರರಾಗುವರೆAಬ ಭಾವನೆಯಿಂದ ಅಣ್ಯವಾಸಿಗಳು ಸಿಡಿದ್ದೆದ್ದು ಸಹಸ್ರಾರು ಸಂಖ್ಯೆಯಲ್ಲಿ ಜಾಥಕ್ಕೆ ಬಂದಿರುವುದು ವಿಶೇಷ.
ಉತ್ತರ ಕನ್ನಡ ಜಿಲ್ಲೆಯ ೧೩೮ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ, ೬೦೪ ಹಳ್ಳಿಗಳಲ್ಲಿನ ಪರಿಸರ ಸೂಕ್ಷö್ಮ ಪ್ರದೇಶಗಳ ಕುಟುಂಬಗಳಿಂದ ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಆಕ್ಷೇಪಣಾ ಪತ್ರ ಸಲ್ಲಿಸುವ ಕಾರ್ಯ ಹೋರಾಟಗಾರ ವೇದಿಕೆ ಕಾರ್ಯ ನಿರ್ವಹಿಸಿರುವುದು ಗಮನಾರ್ಹ ಅಂಶ.
ಜಿಲ್ಲಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಅರಣ್ಯವಾಸಿಗಳು ಸರಕಾರದ ಪ್ರತಿನಿಧಿಯಾಗಿ ಆಗಮಿಸಿದ ಜನಪ್ರತಿನಿಧಿಗಳಿಗೆ ಗಮನ ಸೆಳೆಯುವಲ್ಲಿ ಜಾಥವು ಯಶಸ್ವಿಯಾಗಿದೆ. ಸೋಮವಾರದಿಂದ (ಇಂದಿ ನಿಂದ) ಪ್ರಾರಂಭವಾಗಲಿರುವ ಬೆಳಗಾಂವ ಚಳಿಗಾಲದ ಅಧಿವೇಶನ ಸರಕಾರ ಚರ್ಚಿಸಿ ಪರಿಹಾರ ಸಿಗುವುದೆಂಬ ನಿರೀಕ್ಷೆಯಲ್ಲಿ ಅರಣ್ಯವಾಸಿಗಳು ಇದ್ದಾರೇ ಎಂದು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
ಏಕವ್ಯಕ್ತಿ ಹೋರಾಟ:
ಕಳೆದ ಎರಡು ದಶಕದಿಂದ ಅರಣ್ಯ ಸಮಸ್ಯೆಗಳಿಗೆ ಸ್ಫಂದಿಸಿ ರವೀಂದ್ರ ನಾಯ್ಕ ಸಂಘಟನೆಯ ಮೂಲಕ ಏಕವ್ಯಕ್ತಿಯಾಗಿ ಹೋರಾಟ ಮಾಡುತ್ತಿರುವುದು ಶ್ವಾಘನೀಯ. ಹೋರಾಟಕ್ಕೆ ಬೆಂಬಲವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಲ್ಲದೇ, ನಿರಂತರ ಹೋರಾಟಕ್ಕೆ ಶಾಸಕರಾದ ಭೀಮಣ್ಣ ನಾಯ್ಕ, ಸತೀಶ್ ಶೈಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Read These Next
ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ.
ಯಲ್ಲಾಪುರ: ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...