ಮಂಡ್ಯ: ಮೈಷುಗರ್ ಮತ್ತು ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರು ಬೆಳೆದ ಕಬ್ಬನ್ನು ಬನ್ನಾರಿ ಅಮ್ಮನ್, ಐ.ಸಿ.ಎಲ್, ಚಾಮುಂಡೇಶ್ವರಿ ಹಾಗೂ ಎನ್.ಎಸ್.ಎಲ್ ಸಕ್ಕರೆ ಕಾರ್ಖಾನೆಗಳು ಕೂಡಲೇ ಎತ್ತುವಳಿ ಮಾಡುವಂತೆ ಹಾಗೂ ಸಕ್ಕರೆ ಕಾರ್ಖಾನೆಗಳು ನುರಿಸುವ ಸಾಮಥ್ರ್ಯವನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿಯಾದ ಡಾ.ಎಂ.ವಿ.ವೆಂಕಟೇಶ್ ಅವರು ಸೂಚಿಸಿದರು.
ನಗರದ ಜಿಲ್ಲಾಢಳಿತ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು.
ಅವರು ಕಳೆದ ವರ್ಷ ಮೈಷುಗರ್ ಸಕ್ಕರೆ ಕಾರ್ಖಾನೆಗೆ ಸರಬರಾಜು ಮಾಡಿದ ರೈತರ ಕಬ್ಬನ್ನು ಕಟಾವು ಮಾಡದೇ ವಿಳಂಬ ಮಾಡುತ್ತಿರುವ ಬಗ್ಗೆ ರೈತರಿಂದ ದೂರು ಬರುತ್ತಿದ್ದು, ಈ ಬಗ್ಗೆ ಆದ್ಯತೆ ಮೇರೆಗೆ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಎಲ್ಲಾ ಸಕ್ಕರೆ ಕಾರ್ಖಾನೆಗಳು ಈಗ ಸರಬರಾಜು ಮಾಡುತ್ತಿರುವ ಲಾರಿಗಳ ಜೊತೆಗೆ ಇನ್ನು ಹೆಚ್ಚಿನ ಲಾರಿಗಳನ್ನು ನಿಯೋಜಿಸಿ ಕಬ್ಬು ಕಟಾವು ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸೂಚಿಸಿ, ಸಕ್ಕರೆ ಕಾರ್ಖಾನೆಗಳು ಅರೆಯುವ ಸಾಮಥ್ರ್ಯವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಕುಮುದಾ, ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್ ಹಾಗೂ ಕಾರ್ಖಾನೆಯ ಅಧಿಕಾರಿಗಳು ಉಪಸ್ಥಿತರಿದ್ದರು.