ಮಕ್ಕಳನ್ನು ಒಳ್ಳೆಯ ಹವ್ಯಾಸಗಳತ್ತ ಆಕರ್ಷಿಸುವುದು ಪಾಲಕರ ಕರ್ತವ್ಯ : ಟ. ಗೋವಿಂದಯ್ಯ

Source: S O News Service | By I.G. Bhatkali | Published on 26th May 2019, 1:42 AM | Coastal News | Don't Miss |

ಕಾರವಾರ :  ಮಕ್ಕಳನ್ನು ಒಳ್ಳೆಯ ಹವ್ಯಾಸಗಳತ್ತ ಆಕರ್ಷಿಸಿ ಉತ್ತಮ ನಾಗರಿಕರನ್ನಾಗಿ ಮಾಡುವುದು ಪಾಲಕರ ಕರ್ತವ್ಯವಾಗಿರುತ್ತದೆ ಎಂದು ಹಿರಿಯ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಗೋವಿಂದಯ್ಯ ಹೇಳಿದರು. 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಶುಕ್ರವಾರ ಮುಕ್ತಾಯಗೊಂಡ ಬೇಸಿಗೆ ಶಿಬಿರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳು ಪಾಲಕರನ್ನು ಅನುಕರಣೆ ಮಾಡುವದರಿಂದ ಮೊದಲು ಪಾಲಕರು ಮೋಬೈಲನಂತಹ ವಸ್ತುಗಳನ್ನು ಬದಿಗಿರಿಸಿ, ಪುಸ್ತಕಗಳನ್ನು ಓದುವಂತಹ ಹವ್ಯಾಸ ರೂಡಿಸಿಕೊಂಡಾಗ ಮಕ್ಕಳು ಕೂಡಾ ಪುಸ್ತಕಗಳಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುತ್ತಾರೆ. ಪೋಷಕರು ತಮ್ಮ ಮಕ್ಕಳಿಗೆ ಓದು ಬರಹ ಕಲಿಸುವುದರೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕೆಂದು ಎಂದು ಅಭಿಪ್ರಾಯ ಪಟ್ಟರು. 

ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರವಾರ ಉಪ ವಿಭಾಗಾಧಿಮಕಾರಿ ಅಭಿಜೀನ್.ಬಿ ಅವರು ಮಾತನಾಡಿ ಬೇಸಿಗೆ ಶಿಬಿರ ಮತ್ತು ಇತರೆ ಶಿಬಿರಗಳಲ್ಲಿ ಭಾಗವಹಿಸುವದರಿಂದ ಮಕ್ಕಳ ಮನೋವಿಕಾಸ ಬೇಳೆಯುತ್ತದೆ. ಪಾಲಕರು ಮತ್ತು ಶಿಕ್ಷಕರು ಮಕ್ಕಳಲ್ಲಿ ಸಕರಾತ್ಮಕ ಚಿಂತನೆಗಳನ್ನು ಹೇಳಿಕೊಡಬೇಕು. ಇದರಿಂದ ಭವಿಷ್ಯದಲ್ಲಿ ಸಮಸ್ಯೆಗಳು ಬಂದಾಗ ಎದುರಿಸುವ ಸಾಮಥ್ರ್ಯ ಬರುತ್ತದೆ ಎಂದು ಹೇಳಿದರು. 

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಎಚ್.ನಾಯ್ಕ ಸ್ವಾಗತಿಸಿದರು. ಶ್ರೀಮತಿ ಗೀತಾ ಕಾರ್ಯಕ್ರಮದ ವರÀದಿ ವಾಚಿಸಿದರು. ಅನಿಲ ಜೆ ಪವಾರ ನಿರೂಪಿಸಿದರು. ಕಲ್ಪನಾ ಕಲಾಲೋಕದ ಅಧ್ಯಕ್ಷ ಬಿ.ಎನ್ ಸೂರ್ಯಪ್ರಕಾಶ ವಂದನಾರ್ಪಣೆ ಸಲ್ಲಿಸಿದರು.     
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...