ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ - ಸುನೀಲ್‌ ಕುಮಾರ್ ಬಜಾಲ್

Source: SO News | By Laxmi Tanaya | Published on 12th October 2021, 10:07 PM | Coastal News |

ಮಂಗಳೂರು : ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ, ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.

 ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಮಂಗಳವಾರ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

 ಪಾಲಿಕೆಯು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಹಲವು ನೆಪಗಳ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸವನ್ನು ಕುಂಠಿತಗೊಳಿಸಿದೆ. ಈ ಹಿಂದೆ ಅಭಿವೃದ್ಧಿ ಕೆಲಸಗಳಿಗಾಗಿ ಎಡಿಬಿಯಿಂದ ಎರಡು ಹಂತದಲ್ಲಿ ತಂದಿರುವ ಕೋಟ್ಯಾಂತರ ರೂಪಾಯಿ ಸಾಲವನ್ನು ಸಂದಾಯ ಮಾಡಲು ಬಾಕಿ ಇರಿಸಿದೆ. ಕಳೆದ ವರುಷದ ಮೂರು ಕೋಟಿಯಷ್ಟು ಮೆಸ್ಕಾಂನ ವಿದ್ಯುತ್ ಬಿಲ್ ಕೂಡಾ ಪಾವತಿಸಿಲ್ಲ. ಇಷ್ಟೊಂದು ಸಾಲ ಇರಿಸಿಕೊಂಡು ದಸರಾ ಹಬ್ಬದ ಹೆಸರಲ್ಲಿ ದೀಪಾಲಂಕಾರಕ್ಕಾಗಿ ಹಣ ವ್ಯಯಿಸುವುದು ಎಷ್ಟು ಸರಿ..? ಜನರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಈ ರೀತಿ‌ ಖರ್ಚು ಮಾಡಲು ಸರಕಾರಗಳ ನಿಯಮಗಳಲ್ಲಿ ಯಾವುದೇ ಅವಕಾಶಗಳಿಲ್ಲ. ಪಾಲಿಕೆಯ ಬಿಜೆಪಿ‌ ಆಡಳಿತ ಈ ಕೂಡಲೇ ಮಂಜೂರು‌ ಮಾಡಿರುವ 38 ಲಕ್ಷ ಹಣವನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.

ಪ್ರತಿಭನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಮುಖಂಡರೂ, ಮಾಜಿ ಕಾರ್ಪೊರೇಟರ್ ಗಳಾದ ದಯಾನಂದ ಶೆಟ್ಟಿ, ಜಯಂತಿ ಶೆಟ್ಟಿ, ಜೆಡಿಎಸ್‌ನ ಸುಮತಿ ಎಸ್ ಹೆಗ್ಡೆ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ‌ಸಂತೋಷ್ ಬಜಾಲ್ ರವರು ಮಾತನಾಡಿ, ಜನತೆಯ ತೆರಿಗೆಯ ಹಣವನ್ನು ಲಪಟಾಯಿಸಲು ಹುನ್ನಾರ ನಡೆಸುವ ಬಿಜೆಪಿ ಆಡಳಿತಕ್ಕೆ ಛೀಮಾರಿ ಹಾಕಿದರು.

ಈ ವೇಳೆ ಡಿವೈಎಫ್ಐ ಮಂಗಳೂರು ನಗರ ಮುಖಂಡರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಪ್ರಮೀಳಾ ಶಕ್ತಿನಗರ,ಮನೋಜ್ ಉರ್ವಾಸ್ಟೋರ್ , ಸಿಪಿಐ ಪಕ್ಷದ ಮುಖಂಡರಾದ ವಿ.ಕುಕ್ಯಾನ್, ಕರುಣಾಕರ್, ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ, ಕೃಷ್ಣ ತಣ್ಣೀರುಬಾವಿ,ರಘುವೀರ್, CPIM ಮುಖಂಡರಾದ ಬಾಬು‌ ದೇವಾಡಿಗ, ಅಶೋಕ್ ಸಾಲ್ಯಾನ್, ಉದಯಚಂದ್ರ ರೈ, ನಾಗೇಶ್ ಕೋಟ್ಯಾನ್, ಸಾಮಾಜಿಕ ಚಿಂತಕರಾದ ಪ್ರಮಿಳಾ ದೇವಾಡಿಗ,, ಜೆಡಿಎಸ್ ಮುಖಂಡರಾದ ಹರ್ಷಿತ, ಅಲ್ತಾಫ್ ತುಂಬೆ, ಶಾರದಾ, ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...