ಮಂಗಳೂರು : ದಿಲ್ಲಿ ರೈತರ ಪ್ರತಿಭಟನೆಗೆ ಮಂಗಳೂರಲ್ಲಿ ಬೆಂಬಲ ದೊರೆಯಿತು.
ಮಂಗಳೂರಿನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಯಿತು. ಟ್ರ್ಯಾಕ್ಟರ್ ಗಳ ಜತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದ ಪ್ರತಿಭಟನಾಕಾರರು ಬಳಿಕ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ನಡೆಸಿದರು.
ಮೆರವಣಿಗೆಯಲ್ಲಿ ರೈತರ ಪರ ಘೋಷಣೆ ಮೊಳಗಿತು. ರ್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ರೈತ, ಕಾರ್ಮಿಕ, ದಲಿತ ಜನಪರ ಚಳವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.