ಘನತ್ಯಾಜ್ಯ ಘಟಕಕ್ಕೆ ಪರಿಸರ ರಕ್ಷಣಾ ಸಮಿತಿ ಸದಸ್ಯೆ ಭೇಟಿ ; ಭಟ್ಕಳದ ‘ಕಪಡಾ ಬ್ಯಾಂಕ್ ಕಾರ್ಯಕ್ಕ ಮೆಚ್ಚುಗೆ

Source: sonews | By Staff Correspondent | Published on 24th January 2020, 6:47 PM | Coastal News |

ಭಟ್ಕಳ: ನಗರದ ಸಾಗರ ರಸ್ತೆಯಲ್ಲಿರುವ ಘನತ್ಯಾಜ್ಯ ಘಟಕಕ್ಕೆ ಸುಪ್ರೀಮ್ ಕೋರ್ಟ್‍ನಿಂದ ನಿಯೋಜಿತ ಪರಿಸರ ರಕ್ಷಣಾ ನೀತಿ ಸಮಿತಿ ಸದಸ್ಯೆ ನ್ಯಾಯವಾದಿ ಆಲಮಿತ್ರ ಪಾಟೀಲ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದ್ದು ಘನ ತ್ಯಾಜ್ಯ ವಿಲೇವಾರಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಕಲೆಹಾಕಿದರು. 

ನಂತರ ಇಲ್ಲಿನ ಉಸ್ಮಾನಿಯ ಕಾಲೋನಿಯಲ್ಲಿರುವ ‘ಕಪಡಾ ಬ್ಯಾಂಕ್’ ಗೆ ಭೇಟಿ ನೀಡಿದ ಅವರು ಭಟ್ಕಳದ ಜನರು ಉಪಯೋಗಿಸದೆ ಇರದ ಬಟ್ಟೆಗಳನ್ನು ಕಪಡಾ ಬ್ಯಾಂಕ್ ನಲ್ಲಿ ದೇಣಿಗೆ ನೀಡುವುದರ ಮೂಲಕ ಸಮಾಜಕ್ಕೆ ಹಾಗೂ ಪರಿಸರಕ್ಕೆ ಅಗಾಧ ಪ್ರಮಾಣದಲ್ಲಿ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ಪ್ರಂಶಸಿದರು. ಹಳೆಯ ಬಟ್ಟೆಗಳನ್ನು ಬಡವರಿಗೆ ನೀಡುವುದರ ಮೂಲಕ ಈ ಸಂಸ್ಥೆ ಸಮಾಜ ಸೇವೆಯನ್ನು ಮಾಡುತ್ತಿದ್ದು ಇದರಿಂದಾಗಿ ಹಳೆ ಬಟ್ಟೆಗಳು ತ್ಯಾಜ್ಯಕ್ಕೆ ಸೇರದೆ ಪರಿಸರವನ್ನು ಸ್ವಚ್ಚ ಹಾಗೂ ಸುಂದರವಾಗಿಡುವಲ್ಲಿ ಸಹಕಾರಿಯಾಗುತ್ತದೆ ಎಂದ ಅವರು ಇದನ್ನು ಇತರ ನಗರಗಳಲ್ಲಿಯೂ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆಯಿದೆ  ಎಂದರು. 

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಶಕಗಳಿಂದ ದೇಶದಾದ್ಯಂತ ಸಮರ್ಪಕ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಮೂಡಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ. 1996ರಲ್ಲಿ ಸುಪ್ರಿಮ್ ಕೋರ್ಟ್ ಕದ ತಟ್ಟುವುದರ ಮೂಲಕ ಪರಿಸರ ಸಂರಕ್ಷಣೆಗಾಗಿ ಕ್ರಮ ಜರಗಿಸುವಂತೆ ಆಗ್ರಹಿಸಿದ್ದೇನೆ ನನ್ನ ಹೋರಾಟ ಮುಂದುವರೆಯುತ್ತದೆ ಎಂದರು. 

ಈ ಸಂದರ್ಭದಲ್ಲಿ ಭಟ್ಕಳ ಪುರಸಭಾ ಮುಖ್ಯಾಧಿಕಾರಿ ದೇವರಾಜ, ಜಾಲಿ ಪ.ಪಂ ಮುಖ್ಯಾಧಿಕಾರಿ ವೇಣುಗೋಪಾಲ ಶಾಸ್ತ್ರಿ ಉಪಸ್ಥಿತರಿದ್ದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...