ಪ್ರತಿಭಟನಾ ಸಂದರ್ಭದಲ್ಲಿ ಪ್ರತಿಭಟನಾಕಾರರಿಂದ ರಸ್ತೆ ತಡೆಗೆ ಸುಪ್ರೀಂಕೋರ್ಟ್ ಗರಂ

Source: SO News | By Laxmi Tanaya | Published on 21st April 2021, 8:14 AM | National News | Don't Miss |

ಹೊಸದಿಲ್ಲಿ : ಪ್ರತಿಭಟನಾಕಾರರು  ರಸ್ತೆ ಸಂಚಾರಕ್ಕೆ ತಡೆಯೊಡ್ಡುವುದನ್ನು ಸಹಿಸುವುದಿಲ್ಲ. ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಇನ್ನೂ ಕೂಡಾ ಮುಂದುವರಿಸುತ್ತೀರಾ ಎಂದು ಸುಪ್ರೀಂಕೋರ್ಟ್ ಪ್ರತಿಭಟನಾನಿರತ ರೈತ ನಾಯಕರನ್ನು ಮಂಗಳವಾರ ಪ್ರಶ್ನಿಸಿದೆ.

 ಮುಕ್ತವಾಗಿರುವ ಸಾರ್ವಜನಿಕ ರಸ್ತೆಗಳಲ್ಲಿ  ಸಂಚಾರಕ್ಕೆ ತಡೆಯೊಡ್ಡುವ ಪ್ರವೃತ್ತಿಗೆ ಆಕ್ಷೇಪ ವ್ಯಕ್ತಪಡಿಸಿದೆ. ರಸ್ತೆಯಲ್ಲಿ ತಿರುಗಾಡುವ ನಿವಾಸಿಗಳ ಹಕ್ಕುಗಳಿಗೆ ರೈತನಾಯಕರು ಹಸ್ತಕ್ಷೇಪ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಾಮರ್ಶಿಸುವಂತೆ ತಿಳಿಸಿದೆ.

ನೊಯ್ದಾದಿಂದ ದಿಲ್ಲಿಗೆ ಪ್ರಯಾಣದ ಅವಧಿ 20 ನಿಮಿಷಗಳಾಗಿದ್ದು, ರೈತ ಪ್ರತಿಭಟನೆಯ ಕಾರಣದಿಂದಾಗಿ ತನಗೆ ದಿಲ್ಲಿ ತಲುಪಲು ಎರಡು ತಾಸುಗಳೇ ಬೇಕಾಯಿತು ಎಂದು ದೂರಿ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ಆಲಿಕೆ ನಡೆಸಿದ ಸಂದರ್ಭ ಸುಪ್ರೀಂಕೋರ್ಟ್ ರೈತ ನಾಯಕರನ್ನು ಪ್ರಶ್ನಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದಿಲ್ಲಿಯ ಶಾಹೀನ್‌ಭಾಗ್‌ನಲ್ಲಿ ನಡೆದ ಪ್ರತಿಭಟನೆ ಸೇರಿದಂತೆ ಹಲವಾರು ರಸ್ತೆ ತಡೆಗೆ ಸಂಬಂಧಿಸಿ ವಿವಿಧ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿದ ನಿರ್ದೇಶಗಳನ್ನು ಪಾಲಿಸಲಾಗುತ್ತಿಲ್ಲವೆಂದು ಅರ್ಜಿದಾರೆ ಮೋನಿಕಾ ಅಗರ್‌ವಾಲ್, ಅರ್ಜಿಯಲ್ಲಿ ತಿಳಿಸಿದ್ದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...