ರಾಷ್ಟ್ರಪತಿಯಿಂದ ಸಂಸತ್ ಉದ್ಘಾಟನೆಗೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Source: Vb | By I.G. Bhatkali | Published on 27th May 2023, 6:57 AM | National News | Don't Miss |

ಹೊಸದಿಲ್ಲಿ: ನೂತನ ಸಂಸತ್ ಕಟ್ಟಡವನ್ನು ರಾಷ್ಟ್ರಪತಿಯವರು ಉದ್ಘಾಟಿಸಬೇಕು, ಪ್ರಧಾನಿಯಲ್ಲ ಎಂಬುದಾಗಿ ಲೋಕಸಭಾ ಕಾರ್ಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನೂತನ ಸಂಸತ್‌ ಕಟ್ಟಡವನ್ನು ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

“ಸಂಸತ್ ಕಟ್ಟಡವನ್ನು ಯಾರು ಉದ್ಘಾಟಿಸಬೇಕೆಂದು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ'' ಎಂದು ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠವೊಂದು ಹೇಳಿದೆ. ಸಂಸತ್ತನ್ನು ಉದ್ಘಾಟಿಸುವ ಅಧಿಕಾರವನ್ನು ಯಾವುದೇ ಕಾನೂನು ಕಾರ್ಯಾಂಗದ ಮುಖ್ಯಸ್ಥರಿಗೆ ನೀಡುವುದಿಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ ವಕೀಲ ಸಿ.ಆರ್. ಜಯ ಸುಕಿನ್ ನ್ಯಾಯಾಲಯದಲ್ಲಿ ವಾದಿಸಿದರು.

ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ರಾಷ್ಟ್ರಪತಿ ಎಂದು ಅವರು ಹೇಳಿದರು. ಆಗ, ಇದಕ್ಕೂ ಸಂಸತ್ ಕಟ್ಟಡ ಉದ್ಘಾಟನೆಗೂ ಏನು ಸಂಬಂಧ ಎಂದು ಪೀಠ ಅರ್ಜಿದಾರರನ್ನು ಪ್ರಶ್ನಿಸಿತು.

“ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದಕ್ಕೂ, ಸಂಸತ್ ಕಟ್ಟಡವನ್ನು ಉದ್ಘಾಟಿಸುವುದಕ್ಕೂ ಏನು ಸಂಬಂಧ ಎನ್ನುವುದನ್ನು ನೀವು ದಯವಿಟ್ಟು ನಮಗೆ ತೋರಿಸಿ” ಎಂದು ನ್ಯಾ. ಮಹೇಶ್ವರಿ ಅರ್ಜಿದಾರರನ್ನು ಉದ್ದೇಶಿಸಿ ಹೇಳಿದರು. “ಯಾವ ಸಂಬಂಧವೂ ಇಲ್ಲ. ಇದರ ಬಗ್ಗೆ ನಿರ್ಧರಿಸುವುದು ನ್ಯಾಯಾಲಯದ ಕೆಲಸವೂ ಅಲ್ಲ” ಎಂದರು. ಸಂಸತ್‌ ಕಟ್ಟಡವನ್ನು ಪ್ರಧಾನಿ ಉದ್ಘಾಟಿಸುವುದು ಸಂವಿಧಾನದ 79ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದರು. “ನಾವು 79ನೇ ವಿಧಿಯನ್ನು ನೋಡಿದ್ದೇವೆ. ನಾವೊಂದು ನಿಮಗೆ ಪ್ರಶ್ನೆ ಕೇಳುತ್ತೇವೆ: ಈ ವಿಧಿಗೂ ಈ ವಿಷಯಕ್ಕೂ ಏನು ಸಂಬಂಧ?” ಎಂದು ನ್ಯಾಯಪೀಠ ಹೇಳಿತು.

ಅಂತಿಮವಾಗಿ, ಅರ್ಜಿಯನ್ನು ವಾಪಸ್ ಪಡೆದುಕೊಳ್ಳಲು ಅರ್ಜಿದಾರರು ನ್ಯಾಯಾಲಯದ ಅನುಮತಿ ಕೋರಿದರು. ಆದರೆ, ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...