ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ. ಇಬ್ಬರನ್ನ ಬಂಧಿಸಿದ ಪೊಲೀಸರು.

Source: SO News | By Laxmi Tanaya | Published on 25th October 2020, 12:50 PM | Coastal News | Don't Miss |

ಮಂಗಳೂರು : ತುಳು ಚಿತ್ರ ನಟ ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ ಸಂಬಂಧಿಸಿ ಆತನ ಬಹುಕಾಲದ ಸ್ನೇಹಿತ ಸತೀಶ್ ಕುಲಾಲ್ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

 ಬಾಡಿಗೆ ಕಾರಿನಲ್ಲಿ ಕಾಸರಗೋಡಿನತ್ತ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ ಪಿ ವೆಲೆಂಟೈನ್ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತೀಶ್ ಕುಲಾಲ್ ಜತೆಗೆ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.‌ಅಕ್ಟೋಬರ್ 20 ರಂದು ಬಿ ಸಿ ರೋಡ್ ಬಳಿಯ ಭಂಡಾರಿಬೆಟ್ಟು ನ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ನನ್ನು     ಭೀಕರವಾಗಿ ಹತ್ಯೆ ಮಾಡಲಾಗಿತ್ತು.

 ಪ್ರಕರಣದ ತನಿಖೆಗಾಗಿ ಮೂರು ಪೊಲೀಸ್ ತಂಡವನ್ನು ಮಾಡಲಾಗಿತ್ತು. ಇದೇ ವೇಳೆ ಸತೀಶ್ ಕುಲಾಲ್ ಹೆಸರಿನಲ್ಲಿ ಆಡಿಯೋ ರಿಲೀಸ್ ಮಾಡಿ ಕೊಲೆ ಕೃತ್ಯವನ್ನು ತಾವು ಮಾಡಿದ್ದಾಗಿ ಹೇಳಲಾಗಿತ್ತು. ಆದರೆ  ಆಡಿಯೋ ಹೇಳಿ ಮಾಡಿಸಿದ ರೀತಿಯಲ್ಲಿತ್ತು . ಹೀಗಾಗಿ ಈ ಕೃತ್ಯದ ಹಿಂದೆ ಬೇರೆ ಯಾರದ್ದೋ ಕೈವಾಡ ಇರುವ ಮಾಹಿತಿ ಸಿಕ್ಕಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಸುರೇಂದ್ರ ಬಂಟ್ವಾಳ್ ಫೈನಾನ್ಸ್ ವ್ಯವಹಾರದಲ್ಲಿ  ಆತನಿಂದ ದೊಡ್ಡ ಮೊತ್ತದ ಹಣ ಪಡೆದವರು ಸತೀಶ್ ಕುಲಾಲ್ ಮೂಲಕ ಕೃತ್ಯ ಮಾಡಿಸಿದ್ದಾರೆ ಎನ್ನಲಾಗಿದೆ

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...